ರೈಸಿಂಗ್ ಕನ್ನಡ:
ಹರೀಶ್ ರಾಮನಗರ:
ಕೊರೊನಾ ಕರ್ನಾಟಕದಲ್ಲಿ ರಣಕೇಕೆ ಹಾಕುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಆಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರ ಲಾಕ್ಡೌನ್ ಮಾಡದೇ ಇದ್ರು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಂಸ್ಥೆಗಳು ಸೇರಿಕೊಂಡು ಜನರನ್ನು ಎಚ್ಚರಿಸುತ್ತಿವೆ. ಅಷ್ಟೇ ಅಲ್ಲ ಸ್ವಯಂ ಲಾಕ್ಡೌನ್ ಮಾಡಲು ಮನವಿ ಮಾಡುತ್ತಿವೆ.
ರಾಮನಗರ ಜಿಲ್ಲೆಯಲ್ಲೂ ಕೊರೊನಾ ಕಾಟ ಹೆಚ್ಚುತ್ತಿದೆ. ಹೀಗಾಗಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿ ಜುಲೈ 13 ರಿಂದ 23 ರವರೆಗೆ ಸ್ವಯಂ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ. ಮಾಗಡಿಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಳ ಆಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಿದೆ.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಎ.ಮಂಜು ಸಭೆ ನಡೆಸಿದ್ದರು. ಇದರಲ್ಲಿ ಅಂಗಡಿ ವರ್ತಕರ ಸಂಘದವರು, ಸಣ್ಣ ವ್ಯಾಪಾರಿಗಳ ಸಂಘದವರು ಭಾಗಿಯಾಗಿದ್ದರು. ಮಾಗಡಿಯಲ್ಲಿ ಕೊರೋನಾ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಸ್ವಯಂ ಲಾಕ್ ಡೌನ್ ನಿರ್ಧಾರ ಮಾಡಿದ್ದಾರೆ.
ಮಾಗಡಿಯಲ್ಲಿ ಈವರೆಗೆ 127 ಕೇಸ್ ಗಳು ಪತ್ತೆಯಾಗಿ ಇಬ್ಬರು ಮೃತ ಪಟ್ಟಿದ್ದಾರೆ. ಹೀಗಾಗಿ ಕೊರೋನಾ ತಡೆಗಟ್ಟಲು ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಿ ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?