ರೈಸಿಂಗ್ ಕನ್ನಡ :
ನಾಗರಾಜ್. ವೈ, ಕೊಪ್ಪಳ :
ಜಿಲ್ಲೆಯ ಗಂಗಾವತಿ ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಂಗಾವತಿ ನಗರದಲ್ಲಿ ಎಲ್ಲಾ ವ್ಯಾಪಾರಸ್ಥರ ಸಹಕಾರ ಮತ್ತು ಸಹಮತದಿಂದ ಮಧ್ಯಾಹ್ನ 4 ಗಂಟೆಯಿಂದ ಲಾಕ್ಡೌನ್ಗೆ ನಿರ್ಧರಿಸಲಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.
ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ, ಶಾಸಕರು ಜಿಲ್ಲೆಯಲ್ಲಿ ಸೇರಿದಂತೆ ಗಂಗಾವತಿ ನಗರದಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಕೊರೊನಾ ಪಾಸಿಟಿವ್ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಇನ್ನು ಮುಂದೆ ಗಂಗಾವತಿ ನಗರದಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ಗೆ ನಿರ್ಧರಿಸಲಾಗಿದೆ ಎಂದರು.
ಈ ನಿರ್ಧಾರಕ್ಕೆ ನಗರದ ಎಲ್ಲಾ ವ್ಯಾಪಾರಸ್ಥರು ಒಮ್ಮತ ವ್ಯಕ್ತಪಡಿಸಿದ್ದು, ಲಾಕ್ಡೌನ್ ಯಶಸ್ವಿಯಾಗಲಿದೆ ಎಂದರು. ಈ ಸಂಧರ್ಭದಲ್ಲಿ ಗಂಗಾವತಿ ಡಿವೈಎಸ್ಪಿ ಬಿ.ಪಿ ಚಂದ್ರಶೇಖರ, ಗಂಗಾವತಿ ತಹಶೀಲ್ದಾರ ಎಲ್.ಡಿ ಚಂದ್ರಕಾಂತ, ತಾಲೂಕ ಪಂಚಾಯತ್ ಇಓ ಡಾ.ಮೋಹನ್, ಗಂಗಾವತಿ ನಗರ ಪೊಲೀಸ್ ಠಾಣೆ ಪಿಐ ವೆಂಕಟಸ್ವಾಮಿ, ನಗರಸಭೆ ಪೌರಯುಕ್ತ ಶೇಖರಪ್ಪ ಈಳಿಗೇರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?