Featured
ಸಂಪೂರ್ಣ ನಗರಕ್ಕೆ ಸ್ಯಾನಿಟೈಸ್ ಮಾಡಿಸಿದ ಮಹಾದಾನಿ..! – ಎಲ್ಲಕ್ಕೂ ಪ್ರೇರಣೆಯಾಗಿದ್ದು ಅಮ್ಮನ ನೆನಪು..!

ರೈಸಿಂಗ್ ಕನ್ನಡ :
ಪ್ರತಿನಿಧಿ : ದುರ್ಗೇಶ್ ಮಂಗಿಹಾಳ, ಯಾದಗಿರಿ
ಯಾದಗಿರಿ ಜಿಲ್ಲೆ ಈಗ ಕೊರೊನಾ ಹಾಟಸ್ಪಾಟ್ ಆಗಿದೆ. ಬರೋಬ್ಬರಿ ನಾಲ್ಕು ದಿನಗಳಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಇದ್ರಿಂದಾಗಿ ಜಿಲ್ಲೆಯ ಜನ ಮತ್ತಷ್ಟು ಆತಂಕಕ್ಕೆ ಈಡಾಗಿದ್ದಾರೆ. ಆದ್ರೆ, ಜಿಲ್ಲೆಯ ಶಹಪುರದ ವ್ಯಕ್ತಿಯೊಬ್ಬ ಮಾತ್ರ, ಕೊರೊನಾ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ. ತಾಲೂಕಿನ ಶ್ರೀ ಗುರು ಮಣಿಕಂಠ ಅನ್ನುವವರು, ಸ್ವಯಂ ಪ್ರೇರಿತವಾಗಿ ಬಂದು, ತಮ್ಮ ಸ್ವಂತ ಖರ್ಚಿನಲ್ಲಿ ಸಂಪೂರ್ಣ ನಗರಕ್ಕೆ ಸ್ಯಾನಿಟೈಸ್ ಮಾಡಿಸೋ ವ್ಯವಸ್ಥೆ ಮಾಡಿಸಿದ್ದಾರೆ. ಅದೂ ಕೂಡ ಅಮ್ಮನ ನೆನಪಿಗಾಗಿ.
ಸಂಪೂರ್ಣ ಶಹಾಪುರ ನಗರಕ್ಕೆ ಎರಡು ಟ್ರಾಕ್ಟರ್ ಗಳ ಮೂಲಕ ಸಾನಿಟೈಸರ್ ಮಾಡಿಸುತ್ತಿದ್ದಾರೆ ಈ ಮಹಾದಾನಿ. ಶಹಾಪುರದ ಶ್ರೀ ಅಮ್ಮ ಕ್ಯಾಂಟಿನ ಸ್ಥಾಪಕರೂ ಆಗಿರುವ ಶ್ರೀ ಗುರು ಮಣಿಕಂಠ, ತಮ್ಮ ಅಮ್ಮನ 36 ಪುಣ್ಯ ಸ್ಮರಣೆ ಅಂಗವಾಗಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಗರದೆಲ್ಲಡೆ ಸಾನಿಟೈಸ್ ಮಾಡಿಸುತ್ತಿದ್ದಾರೆ.
ಈ ಸಮಾಜಮುಖಿ ಕಾರ್ಯಕ್ಕೆ, ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ಸೋಮ್ನಾಳ ಹಾಗೂ ಶಾಸಕರ ಸಹೋದರ ಅಂಬ್ರೇಶ್ ಗೌಡ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ರು. ಮಂಗಳವಾರದಿಂದಲೇ ಸಾನಿಟೈಸರ್ ಸಿಂಪಡಣೆ ನಡೆಯುತ್ತಿದ್ದು, ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ಪ್ರಮುಖ ರಸ್ತೆಗಳು, ಸರ್ಕಾರಿ ಕಚೇರಿ, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಾನಿಟೈಸರ್ ಸಿಂಪಡಿಸಲಾಗುತ್ತಿದೆ.

ಕಳೆದ ಎರಡು ವರ್ಷಗಳಿಂದ ಅಮ್ಮನ ನೆನಪಿಗಾಗಿ ಜಿಲ್ಲೆಯಲ್ಲಿ ಮೊಟ್ಟಮೊದಲಿಗೆ ಅಮ್ಮ ಕ್ಯಾಂಟಿನ್ ತೆಗೆದು ಬಡವರ ಹಸಿವು ನೀಗಿಸಿ ಮಾದರಿಯಾಗಿರೋ ಮಾಹಾದಾನಿ ಇವರಾಗಿದ್ದಾರೆ. ಇದೀಗ ಶಹಾಪುರದಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗ್ತಿರುವ ಹಿನ್ನೆಲೆಯಲ್ಲಿ, ವೈಯಕ್ತಿಕವಾಗಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಸಾನಿಟೈಸರ್ ಔಷಧಿ ಸಿಂಪಡಣೆ ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.
ಯಾವುದೇ ರಾಜಕೀಯ ಪಕ್ಷದ ಲಾಭ ಪಡೆಯದೆ ಗುರು ಮಣಿಕಂಠ ಅವರು ಸಾಮಾಜಿಕ ಕಾಳಜಿ ತೋರುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಇವರ ಈ ಕಾರ್ಯ ಇತರರಿಗೂ ಮಾದರಿಯಾಗಬೇಕಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?