ಬೆಂಗಳೂರು : ಉಪ ಚುನಾವಣಾ ಕಣ ರಂಗೇರುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಅದರಲ್ಲೂ ಹಲವಾರು ವರ್ಷಗಳಿಂದ ಜಿದ್ದಾಜಿದ್ದಿನ ಕಣವಾಗಿರೋ ಹೊಸಕೋಟೆಯಲ್ಲಿ ಯಾರಿಗೆ ಯಾವ ಪಕ್ಷದಿಂದ ಟಿಕೆಟ್ ಅನ್ನೋದು ಚರ್ಚೆ ಜೋರಾಗ್ತಿದೆ. ಕಾಂಗ್ರೆಸ್ನಲ್ಲಿದ್ದ ಎಂಟಿಬಿ ನಾಗರಾಜ್ ಈಗ ಕಾಂಗ್ರೆಸ್ನಲ್ಲಿ ಇಲ್ಲ. ಬಿಜೆಪಿಯ ಅಭ್ಯರ್ಥಿ ಆಗೋದು ಪಕ್ಕಾ. ಆದ್ರೆ, ಬಿಜೆಪಿ ಅಭ್ಯರ್ಥಿ ಆಗಿ ಸೋತಿದ್ದ ಶರತ್ ಬಚ್ಚೇಗೌಡ ನಡೆ ನಿಗೂಢವಾಗಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿರೋ ಬಿ.ಎನ್. ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ಹೊಸಕೋಟೆ ಕ್ಷೇತ್ರದ ಮೇಲೆ ತುಂಬಾ ಆಸೆ ಇಟ್ಕೊಂಡಿದ್ರು. ಆದ್ರೀಗ, ಎಂಟಿಬಿ ಬಿಜೆಪಿ ಅಭ್ಯರ್ಥಿ ಆಗ್ತಿದ್ದಾರೆ. ಹೀಗಾಗಿ, ದಿಢೀರ್ ಬೆಳವಣಿಗೆಯಲ್ಲಿ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ, ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಆದ್ರೆ, ಏನು ಚರ್ಚೆ ಆಗಿದೆ..? ಭೇಟಿಯ ಉದ್ದೇಶ ಏನು ಅನ್ನೋದು ಇನ್ನೂ ಹೊರಬಿದ್ದಿಲ್ಲ. ಈಗಾಗಲೇ ಹೊಸಕೋಟೆಯಲ್ಲಿ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ ಮಾಡಿದೆ. ಭೈರತಿ ಸುರೇಶ್ ಪತ್ನಿಯನ್ನ ಎಂಬಿಟಿ ನಾಗರಾಜ್ ಎದುರು ನಿಲ್ಲಿಸೋ ಪ್ರಯತ್ನ ನಡೀತಿದೆ.
ಸಿದ್ದರಾಮಯ್ಯ ಅವರನ್ನ ಶರತ್ ಬಚ್ಚೇಗೌಡ ಭೇಟಿಯಾಗಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಹೋಗ್ತಾರಾ..? ಪಕ್ಷೇತರ ಅಭ್ಯರ್ಥಿ ಆಗ್ತಾರಾ..? ಸಿದ್ದರಾಮಯ್ಯ ಜೊತೆ ಶರತ್ ನಡೆಸಿದ ಚರ್ಚೆ ಏನು..? ಅನ್ನೋದರ ಬಗ್ಗೆ ಸಾಕಷ್ಟು ಚರ್ಚೆ ಕುತೂಹಲ ಮೂಡಿಸಿದೆ.
ಶರತ್ ಬಚ್ಚೇಗೌಡ ಹಾಗೂ ಸಿದ್ದರಾಮಯ್ಯ ಭೇಟಿ ಕುರಿತು ಮಾತ್ನಾಡಿರೋ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಚ್ಚೇಗೌಡರು ನಮ್ಮ ಪಕ್ಷದ ನಾಯಕರು. ಅವರ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ನಾನು ಪ್ರತಿಕ್ರಿಯೆ ನೀಡೋದು ಸಮಂಜಸ ಅಲ್ಲ ಎಂದು ಜಾರಿಕೊಂಡಿದ್ದಾರೆ. ಪಕ್ಷ ಎಲ್ಲವನ್ನೂ ನೀಡಿದೆ, ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?