Connect with us

Featured

JDS ಜೊತೆಗಿನ ಮೈತ್ರಿಯೇ ಸೋಲಿಗೆ ಕಾರಣ – ಟ್ವಿಟ್ಟರ್​ನಲ್ಲಿ ಮಾಜಿ ಸಿಎಂ ತಿರುಗುಬಾಣ

Siddaramaaih

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ರಾಜ್ಯ ಕಾಂಗ್ರೆಸ್​ಗೆ ಹೊಸ ನಾಯಕನಾಗಿ ಡಿ.ಕೆ,ಶಿವಕುಮಾರ್​ ಅಧಿಕಾರ ವಹಿಸಿಕೊಂಡಿದ್ದಾರೆ. ಆದ್ರೆ ಪಕ್ಷದೊಳಗೆ ಯಾವುದೂ ಸರಿ ಇಲ್ಲ ಅನ್ನುವುದು ಪದೇ ಪದೇ ಹೊರಗೆ ಬರುತ್ತಿದೆ. ಡಿ.ಕೆ.ಶಿವಕುಮಾರ್​​​ ಜೆಡಿಎಸ್​ ಮೈತ್ರಿ ಬಗ್ಗೆ ಸಾಫ್ಟ್​ ಕಾರ್ನರ್​ ತಳೆದಿದ್ದರೆ, ಕಾಂಗ್ರೆಸ್​ನ ಪ್ರಭಾವಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಹಿರಂಗವಾಗಿಯೇ ಜೆಡಿಎಸ್​ ವಿರುದ್ಧ ತಿರುಗಿಬಿದ್ದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷದ ಹೀನಾಯ ಪ್ರದರ್ಶನಕ್ಕೆ ಜೆಡಿಎಸ್​ ಜೊತೆಗಿನ ಮೈತ್ರಿಯೇ ಕಾರಣವೆಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಜೆಡಿಎಸ್​ ಜೊತೆಗೆ ಹೆಜ್ಜೆ ಇಟ್ಟು ಕಾಂಗ್ರೆಸ್​ ಅತೀ ದೊಡ್ಡ ತಪ್ಪು ಮಾಡಿತು ಎಂದು ಸಿದ್ಧು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಯ ವೇಳೆ ಮೈತ್ರಿ ಬೇಡ ಎಂದು ಸಿದ್ದು ಮೊದಲೇ ಕಾಂಗ್ರೆಸ್​ ನಾಯಕರಿಗೆ ತಿಳಿಸಿದ್ದರಂತೆ. ಜೆಡಿಎಸ್​ ಜೊತೆಗಿನ ಮೈತ್ರಿಯಿಂದ ಅಂದುಕೊಂಡಂತೆ ಮತ ಧ್ರುವೀಕರಣ ಅಸಾಧ್ಯ ಎಂದು ಹೇಳಿದ್ದೆ. ಆದರೆ ಅನಿವಾರ್ಯವಾಗಿ ಮೈತ್ರಿ ಮಾಡಿಕೊಂಡಿದ್ದೆವು. ಮೈತ್ರಿ ಇಲ್ಲದೇ ಇದ್ದಿದ್ದರೆ ಕನಿಷ್ಟ 7ರಿಂದ 8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು ಎಂದು ಸಿದ್ಧು ಹೇಳುವ ಮೂಲಕ ಜೆಡಿಎಸ್​ಗೆ ಬಿಸಿ ಮುಟ್ಟಿಸಿದ್ದಾರೆ.  

Advertisement

ಸದ್ಯ ಕಾಂಗ್ರೆಸ್​ನಲ್ಲಿ ಎರಡು ಬಣ ಇದೆ ಎಂದು ಹೇಳಲಾಗುತ್ತಿದೆ. ಪ್ರಭಾವಿ ಮತ್ತು ಮಾಜಿ ಸಿಎಂ ಆಗಿರುವ ಸಿದ್ಧರಾಮಯ್ಯ ಜೆಡಿಎಸ್​​ ಅನ್ನು ದೂರ ಇಡುವ ಪ್ರಯತ್ನದಲ್ಲಿದ್ದಾರೆ. ಮತ್ತೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಜೆಡಿಎಸ್​ ಬಗ್ಗೆ ಸಾಫ್ಟ್​ ಕಾರ್ನರ್​ ಇದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಲ್ಲಿ ಡಿಕೆಶಿ ಮತ್ತು ಮಾಜಿ ಮುಖ್ಯಮಂತ್ತಿ ಹೆಚ್​.ಡಿ.ಕುಮಾರ್​ ಸ್ವಾಮಿ ಜೋಡೆತ್ತುಗಳೆಂದು ಘೋಷಿಸಿಕೊಂಡಿದ್ದರು. ಆದರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಎದುರು ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಸೋಲು ಕಂಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ರೆ, ಜೆಡಿಎಸ್​​ ಹಾಸನ ಮತ್ತು ಕಾಂಗ್ರೆಸ್​​​ ಬೆಂಗಳೂರು ಗ್ರಾಮಾಂತ್ರ ಕ್ಷೇತ್ರವನ್ನು ಮಾತ್ರ ಗೆದ್ದುಕೊಂಡಿತ್ತು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜಯಭೇರಿ ಬಾರಿಸಿ ಲೋಕಸಭೆ ಪ್ರವೇಶಿಸಿದ್ದರು.  ಲೋಕಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್​​ ಮತ್ತು ಜೆಡಿಎಸ್​ ಮೈತ್ರಿ ಸರ್ಕಾರ ಪತನಗೊಂಡಿತ್ತು.

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ