ರೈಸಿಂಗ್ ಕನ್ನಡ : ಬೈ ಎಲೆಕ್ಷನ್ ವಾರ್ ದಿನದಿಂದ ದಿನಕ್ಕಲ್ಲ, ಗಂಟೆ ಗಂಟೆಗೂ ಕಾವು ಜೋರಾಗ್ತಿದೆ. ಅದರಲ್ಲಿ 14 ತಿಂಗಳ ಕಾಲ ದೋಸ್ತಿಗಳಾಗಿದ್ದ ಮಾಜಿ ಸಿಎಂಗಳಾದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ಜಗಳ ತಾರಕಕ್ಕೇರಿದೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಇವತ್ತು ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಮಾತ್ನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಕಟ್ಟಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.
ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿ ಇದ್ದು, ಮಜಾ ಮಾಡಿರೋದು ಗೊತ್ತಿದೆ. ಪಾಪ ಮೂಲ ಕಾಂಗ್ರೆಸ್ಸಿಗರನ್ನು ಮೂಲೆ ಗುಂಪು ಮಾಡಿ ಅಧಿಕಾರದ ಮಜಾ ಮಾಡಿದ್ದಾರೆ. ತಾಕತ್ ಇದ್ರೆ, ಸಿದ್ದರಾಮಯ್ಯ ಕಾಂಗ್ರೆಸ್ನಿಂದ ಹೊರಗೆ ಬಂದು ಒಂದು ಹೊಸ ಪಕ್ಷ ಕಟ್ಟಲಿ ನೋಡೋಣ ಎಂದು ಹೆಚ್.ಡಿ. ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
ಇದೇ ವೇಳೆ ಮಾತ್ನಾಡಿದ ಹೆಚ್ಡಿಕೆ, ನಾನು ಯಾರನ್ನು ಬಳಸಿಕೊಂಡಿಲ್ಲ. ನನ್ನನ್ನು ಅವರೇ ಬಳಸಿಕೊಂಡು ಬಿಸಾಡಿರೋದು. ನನಗೆ ಅಧಿಕಾರ ಕೊಡ್ರಪ್ಪ ಎಂದು ಅವರ ಮನೆಗೆ ನಾನು ಹೋಗಿದ್ನಾ..? ನನ್ನನ್ನು ಉಪಯೋಗ ಮಾಡಿಕೊಂಡು ಏನೇನು ಮಾಡಿಕೊಂಡಿದ್ದಾರೆ ಅನ್ನೋದು ಗೊತ್ತು. ಅದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ನಾನು ಅಧಿಕಾರಕ್ಕೆ ಬಂದು ನನ್ನ ಶಕ್ತಿಯನ್ನು ಹಾಳು ಮಾಡಿಕೊಂಡೆ ಎಂದು ನೋವನ್ನ ಹೊರ ಹಾಕಿದ್ರು.
ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರೋ ಸಿದ್ದರಾಮಯ್ಯ, ನನಗೇನು ತಲೆಕಟ್ಟಿದೆಯೇ. ಹೊಸ ಪಕ್ಷ ಯಾಕೆ ಕಟ್ಟಬೇಕು. ನಾನು ಕಾಂಗ್ರೆಸ್ನಲ್ಲಿ ಇದ್ದೇನೆ. ಯಾರ ಹಂಗಿನಲ್ಲೂ ಇಲ್ಲ ಎಂದು ಕುಮಾರಸ್ವಾಮಿಗೆ ಮತ್ತೆ ತಿರುಗೇಟು ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?