Featured
ರಾಜ್ಯ ಸರ್ಕಾರಕ್ಕೆ ಟ್ವೀಟ್ ಮೂಲಕವೇ ಚಳಿ ಬಿಡಿಸಿದ ಸಿದ್ದರಾಮಯ್ಯ! – ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಆರೋಪ..!

ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ನಡುವೆಯೇ ಅತಿವೃಷ್ಟಿ ರಾಜ್ಯವನ್ನ ಕಾಡುತ್ತಿದೆ. ಈ ಮಧ್ಯೆ, ರಾಜ್ಯ ಸರ್ಕಾರ ಬೆಂಕಿ ಬಿದ್ದ ಮೇಲೆ ನೀರಿಗಾಗಿ ಬಾವಿ ತೋಡಲು ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಲಿಂದ ಮೇಲೆ ಟ್ವೀಟ್ ಮಾಡೋ ಮೂಲಕ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳುತ್ತಿರೋ ಮಾಡಿ ಸಿಎಂ, ಅತಿವೃಷ್ಟಿಯಿಂದ ರಾಜ್ಯ ಸರ್ಕಾರದ ಕೈಕಾಲು ಬಿಡಲಿದೆ ಎಂದು ಆರೋಪಿಸಿದ್ದಾರೆ.
ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಇನ್ನೂ ಪರಿಹಾರವನ್ನ ರಾಜ್ಯ ಸರ್ಕಾರ ಸರಿಯಾಗಿ ಕಲ್ಪಿಸಿಲ್ಲ. ಹೀಗಾಗಿ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಈ ಕುರಿತು ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ಥಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಎಂದು ಸಚಿವ ಗೋವಿಂದ ಕಾರಜೋಳ ಅವರನ್ನ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು? ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್ನಲ್ಲಿವೆ?ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಈ ಮಾಹಿತಿ ನೀಡುವಿರಾ ಎಂದು ಸಚಿವ ಸೋಮಣ್ಣ ಅವರನ್ನು ಪ್ರಶ್ನಿಸಿದ್ದಾರೆ.

ಅಲ್ಲದೇ ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು? ದಯವಿಟ್ಟು ವಿವರ ನೀಡುವಿರಾ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಆಗ್ರಹಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?