Connect with us

Featured

ರಾಜಸ್ಥಾನ ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್- ಸ್ಪೀಕರ್ ನಿರ್ಧಾರ ಬಳಿಕ ಹೈಕೋರ್ಟ್ ಮಧ್ಯ ಪ್ರವೇಶ- ಪೈಲಟ್ ಮತ್ತು ಬೆಂಬಲಿಗರ ಮುಂದಿನ ನಡೆ ಏನು..?

ರೈಸಿಂಗ್​​ ಕನ್ನಡ ನ್ಯೂಸ್​ ಡೆಸ್ಕ್​​:

ರಾಜಸ್ಥಾನ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್​ ಸಿಗುತ್ತಿದೆ. ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​​​​ ಸರ್ಕಾರದ ವಿರುದ್ಧ ಸಮರ ಸಾರಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್​​ ಪೈಲಟ್​ ಹಾಗೂ 18 ಬೆಂಬಲಿಗ ಶಾಸಕರ ನಡುವೆ ಜಂಗೀಕುಸ್ತಿ ಜೋರಾಗಿ ನಡೆಯುತ್ತಿದೆ. ಇತ್ತ ರಾಜಸ್ಥಾನ ವಿಧಾನಸಭೆಯ ಸ್ಪೀಕರ್​ ಸಿ.ಪಿ.ಜೋಷಿ ಸಚಿನ್​​ ಪೈಲಟ್​ ಮತ್ತು ಬೆಂಬಲಿಗರಿಗೆ ಅನರ್ಹತೆ  ನೋಟಿಸ್​​ ನೀಡಿದೆ. ಸ್ಪೀಕರ್​ ನೋಟಿಸ್​ ವಿರುದ್ಧ ರಾಜಸ್ಥಾನ ಹೈಕೋರ್ಟ್​ ಮೆಟ್ಟಲೇರಿದ್ದ ಸಚಿನ್​ ಪೈಲಟ್​ ಮತ್ತು ಬೆಂಬಲಿಗರಿಗೆ ಹಿನ್ನಡೆಯಾಗಿದೆ. ರಾಜಸ್ಥಾನದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸ್ಪೀಕರ್‌ ನಿರ್ಧಾರ ತೆಗೆದುಕೊಳ್ಳುವವರೆಗೂ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್‌ ಹೇಳಿದೆ. ಈ ಮೂಲಕ ರಾಜಸ್ಥಾನದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಸ್ಪೀಕರ್‌ ವಿವೇಚನೆಗೆ ಹೈಕೋರ್ಟ್‌ ವರ್ಗಾಯಿಸಿದೆ.

Advertisement

ಮಾಜಿ ಡಿಸಿಎಂ ಸಚಿನ್‌ ಪೈಲಟ್‌ ಹಾಗೂ 18 ಅತೃಪ್ತ ಕಾಂಗ್ರೆಸ್ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದ್ರಜಿತ್‌ ಮಹಂತಿ ಹಾಗೂ ನ್ಯಾಯಮೂರ್ತಿ ಪ್ರಶಾಂತ್‌ ಗುಪ್ತಾ ಅವರ ದ್ವಿಸದಸ್ಯ ಪೀಠ ಮೊದಲು ಸ್ಪೀಕರ್‌ ನಿರ್ಧಾರ ತಿಳಿಸಲಿ ಎಂದು ಹೇಳಿದ್ದಾರೆ. ಇನ್ನು, ರಾಜಸ್ಥಾನ ಸ್ಪೀಕರ್‌ ಸಿ.ಪಿ.ಜೋಷಿ ಪರ ವಾದ ಮಂಡನೆ ಮಾಡಿದ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ, ಸ್ಪೀಕರ್‌ ಮತ್ತು ವಿಧಾನಸಭೆ ನ್ಯಾಯಾಂಗದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದು, ಸ್ಪೀಕರ್‌ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಮುಂಚೆ ನ್ಯಾಯಾಲಯ ಮಧ್ಯಪ್ರವೇಶಿಸಲೂ ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ.

ಸಚಿನ್‌ ಪೈಲಟ್‌ ಮತ್ತು ತಂಡದ ಪರ ಹಿರಿಯ ವಕೀಲರಾದ ಹರೀಶ್‌ ಸಾಳ್ವೆ ಮತ್ತು ಮುಕುಲ್‌ ರೋಹಟಗಿ ವಾದಿಸುತ್ತಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದ ಕೋರ್ಟ್‌ ಮಂಗಳವಾರದವರೆಗೂ ಪೈಲಟ್‌ ಮತ್ತು ಇತರ ಶಾಸಕರ ಮೇಲೆ ಯಾವುದೇ ಕ್ರಮ ಜರುಗಿಸಬಾರದು ಎಂದು ಹೇಳಿ ವಿಚಾರಣೆ ಮುಂದೂಡಿತ್ತು. ಕಳೆದ ಭಾನುವಾರದಿಂದಲೂ ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಸಚಿನ್‌ ಪೈಲಟ್‌ ಹಾಗೂ ಅವರ ಬೆಂಬಲಿಗ ಶಾಸಕರು ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಜೊತೆಗೆ ಜುಲೈ 13-14ರಂದು ನಡೆದ ಸಿಎಲ್‌ಪಿ ಸಭೆಗೆ ಹಾಜರಾಗಿಲ್ಲ ಎಂದು ಅತೃಪ್ತರ ಮೇಲೆ ಅನರ್ಹತೆ ಅಸ್ತ್ರ ಪ್ರಯೋಗಕ್ಕೆ ಸ್ಪೀಕರ್‌ ಮುಂದಾಗಿ ನೋಟಿಸ್‌ ನೀಡಿದ್ದರು.

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ