ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ಜೊತೆಯಲ್ಲೇ ವರುಣನ ಹಾವಳಿ ರಾಜ್ಯವನ್ನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸೋ ಸಾಧ್ಯತೆ ಇದೆ. ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಆರ್ಥಿಕ ನೆರವು ಕೇಳಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು 4 ಸಾವಿರ ಕೋಟಿ ವಿಶೇಷ ಆರ್ಥಿಕ ನೆರವು ನೀಡಬೇಕೆಂದು ಮನವಿ ಮಾಡಿದೆ.
ಜೊತೆಯಲ್ಲೇ ರಾಜ್ಯ ವಿಕೋಪ ಪರಿಹಾರ ನಿಧಿಯ ಎರಡನೇ ಕಂತಾಗಿರೋ 395 ಕೋಟಿಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಇದಕ್ಕೆ ಪ್ರಧಾನಿಯಿಂದಲೂ ಉತ್ತಮ ಪ್ರತಿಕ್ರಿಯೆ ಬಂದಿದೆ ಎನ್ನಲಾಗಿದೆ.
ಹಲವು ರಾಜ್ಯಗಳ ನೆರೆಪರಿಹಾರ ಕುರಿತು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಈ ವಿಚಾರ ಚರ್ಚೆಯಾಗಿದೆ ಎನ್ನಲಾಗಿದೆ. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ವಿವರ ನೀಡಿದ್ದಾರೆ.
ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿದ ತೀವ್ರ ಮಳೆಯಿಂದಾಗಿ ಪ್ರಾಥಮಿಕ ಅಂದಾಜಿನ ಪ್ರಕಾರ ರೂ.4 ಸಾವಿರ ಕೋಟಿ ಮೌಲ್ಯದ ಆಸ್ತಿಪಾಸ್ತಿ, ಬೆಳೆ, ರಸ್ತೆ, ಸೇತುವೆಗಳು ಹಾಳಾಗಿವೆ. 3500 ಕಿಮೀ ರಸ್ತೆ, 394 ಕಟ್ಟಡಗಳು, 550 ಸೇತುವೆಗಳು, 104 ಸಣ್ಣ ನೀರಾವರಿ ಕೆರೆಗೆಳು, ವಿದ್ಯುತ್ ಪರಿವರ್ತಕಗಳು ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿಯುಂಟಾಗಿದೆ. 1744 ಪುನರ್ ವಸತಿ ಕೇಂದ್ರಗಳನ್ನು ಗುರುತಿಸಲಾಗಿದೆ.
ಅಲ್ಲದೇ, ಪ್ರವಾಹದಲ್ಲಿ ಮೃತಪಟ್ಟ ಕುಟುಂಗಳಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಸಂಪೂರ್ಣವಾಗಿ ಸಮೀಕ್ಷೆ ನಡೆಸಿದ ಬಳಿಕ ನಷ್ಟದ ಮೊತ್ತ ತಿಳಿದು ಬರಲಿದೆ ಎಂದು ಬೊಮ್ಮಾಯಿಯವರು ಪ್ರಧಾನಮಂತ್ರಿಗಳಿಗೆ ವಿವರ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?