ರಾಜ್ಯ
ಖಾಸಗಿ ಶಾಲಾ-ಕಾಲೇಜು ಶಿಕ್ಷಕರ ಸ್ಥಿತಿಗತಿ ಅಧ್ಯಯನವಾಗಬೇಕು – ಆಯೋಗ ರಚಿಸಲು ಸರ್ಕಾರಕ್ಕೆ ಆಗ್ರಹ..!

ರೈಸಿಂಗ್ ಕನ್ನಡ :
ಮೈಸೂರು :
ಕೊರೊನಾ ಸಾಂಕ್ರಾಮಿಕ ಇಡೀ ಜಗತ್ತನ್ನೇ ಕಾಡುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರೋ ವೈರಸ್ನಿಂದಾಗಿ, ಎಲ್ಲಾ ಕ್ಷೇತ್ರಗಳು ಸಂಕಷ್ಟಕ್ಕೆ ಸಿಲುಕಿವೆ. ಇದಕ್ಕೆ ಶಿಕ್ಷಣವೂ ಹೊರತಾಗಿಲ್ಲ. ಅದ್ರಲ್ಲೂ ಖಾಸಗಿ ಶಾಲಾ, ಕಾಲೇಜುಗಳ ಸಿಬ್ಬಂದಿಗಳು ಅನುಭವಿಸುತ್ತಿರೋ ಸಂಕಷ್ಟ ಅಷ್ಟಿಷ್ಟಲ್ಲ. ಇದೇ ಕಾರಣಕ್ಕಾಗಿ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರೋ ಶಿಕ್ಷಕರು ಮತ್ತು ಉಪನ್ಯಾಸಕರ ಸಮಸ್ಯೆಗಳು ಮತ್ತು ಸ್ಥಿತಿಗತಿಗಳ ಅಧ್ಯಯನ ಮಾಡಲು ಆಯೋಗವೊಂದನ್ನ ರಚಿಸಬೇಕು ಅನ್ನೋ ಕೂಗು ಕೇಳಿಬಂದಿದೆ.
ಈ ಕುರಿತು ಜಿಲ್ಲೆಯಲ ಹುಣಸೂರು ತಾಲೂಕಿನಲ್ಲಿ ಆಯೋಜಿಸಿದ್ದ ಸಂವಾದವೊಂದರಲ್ಲಿ, ಈ ಕುರಿತು ಒಮ್ಮತದ ಅಭಿಪ್ರಾಯ ವ್ಯಕ್ತವಾಯ್ತು. ನಗರದ ಶಾಸ್ತ್ರಿ ಪಿಯುಸಿ ಕಾಲೇಜು ಹಾಗೂ ವಿಜಯ ಕರ್ನಾಟಕ ಸಹಯೋಗದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಹುಣಸೂರು ಉಪವಿಭಾಗದ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪಾಲ್ಗೊಂಡು ತಮ್ಮ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ರು.

ಕೊರೊನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರೋ ಖಾಸಗಿ ಶಿಕ್ಷಣ ಕ್ಷೇತ್ರವನ್ನ ಪುನಶ್ಚೇತನಗೊಳಿಸಲು ಆಡಳಿತ ಮಂಡಳಿಗಳಿಗೆ ಬಡ್ಡಿರಹಿತ ಸಾಲವನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಲಾಯಿತು.
ಇದೇ ವೇಳೆ ಮಾತನಾಡಿದ ಮರದೂರಿನ ಲಾ ಸಾಲೆಟ್ ಇಂಟರ್ನ್ಯಾಷಿನಲ್ ಪಿಯು ಕಾಲೇಜನಿ ಪ್ರಿನ್ಸಿಪಾಲ್ ಆದ ರವಿ ವಿ ದೀಪಕ್, ಗ್ರಾಮೀಣ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಎಲ್ಇಡಿ ವ್ಯವಸ್ಥೆ ಮಾಡಿ, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಟೆಲಿಕಾನ್ಫರೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?