Featured
ಬ್ಲಾಕ್ಮೇಲ್ ಮಾಡಿ ವಿಶ್ವನಾಥ್ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ – ಸಾ.ರಾ ಮಹೇಶ್ ಆರೋಪ..!

ರೈಸಿಂಗ್ ಕನ್ನಡ :
ಮೈಸೂರು :
ಮಾಜಿ ಸಚಿವ ಹೆಚ್.ವಿಶ್ವನಾಥ್ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರೋದು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದಾಗಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಆರೋಪಿಸಿದ್ದಾರೆ.
ವಿಶ್ವನಾಥ್ ನಾಮನಿರ್ದೇಶನಗೊಂಡಿರೋದ್ರಿಂದ, ಸುಪ್ರೀಂ ಕೋರ್ಟ್ ತೀರ್ಪಿನ್ನ ಸ್ಪಷ್ಟವಾಗಿ ಉಲ್ಲಂಘಗಿಸಲಾಗಿದೆ ಎಂದು ಹೇಳಿದ್ದಾರೆ. ಹಾಗಾಗಿ ಈ ಕುರಿತು ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಪತ್ರ ಬರೆಯಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್ ಮೈಸೂರಿನಲ್ಲಿ ತಿಳಿಸಿದ್ದಾರೆ.
ಮೈಸೂರಿನ ತಮ್ಮ ಕಚೇರಿ ಆವರಣದಲ್ಲಿ ಮಾತನಾಡಿದ ಅವರು, ಅನರ್ಹಗೊಂಡ ಶಾಸಕರು ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಬಂದಲ್ಲಿ ಮಾತ್ರವೇ ಅವರು ಯಾವುದೇ ರಾಜಕೀಯ ಹುದ್ದೆಗಳಿಗೆ ನಾಮ ನಿರ್ದೇಶನಗೊಳ್ಳಲು ಅರ್ಹರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹೀಗಿದ್ದರೂ ರಾಜ್ಯಪಾಲರು ಅನರ್ಹಗೊಂಡ ಶಾಸಕ ಹೆಚ್.ವಿಶ್ವನಾಥ್ ಅವರನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲದಿದ್ದರೂ, ವಿಧಾನ ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಲಾಗಿದೆ. ಹಾಗಾಗಿ ಇದನ್ನು ಪ್ರಶ್ನಿಸಿ ರಾಜ್ಯಪಾಲರು ಹಾಗೂ ಸ್ಪೀಕರ್ ಅವರಿಗೆ ಪತ್ರ ಬರೆಯುತ್ತಿದ್ದೇನೆ ಎಂದಿದ್ದಾರೆ ಸಾರಾ ಮಹೇಶ್. ವಿ
ತಮ್ಮೊಂದಿಗೆ ಹಲವು ಶಾಸಕರನ್ನ ರಾಜೀನಾಮೆ ಕೊಡಿಸಿ ಅವರನ್ನು ಮುಂಬೈಗೆ ಕರೆದುಕೊಂಡು ಹೋದ ಸಂಪೂರ್ಣ ಚಿತ್ರಣವನ್ನು ಒಳಗೊಂಡ ಬಾಂಬೆ ಡೈರಿ ಬರೆಯುತ್ತೇನೆ ಎಂದು ಬ್ಲಾಕ್ಮೇಲ್ ತಂತ್ರ ಮಾಡುವ ಮುಖಾಂತರ ವಿಶ್ವನಾಥ್ ವಿಧಾನಪರಿಷತ್ ಸ್ಥಾನ ಪಡೆದು ಕೊಂಡಿದ್ದಾರೆ. ಇದರಿಂದ ಮೇಲ್ಮನೆ ಕಲುಷಿತಗೊಂಡಿದೆ, ಎಂದು ಸಾರಾ ಮಹೇಶ್ ಕಿಡಿಕಾರಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?