Featured
ಮೊದಲ ಪಂದ್ಯದಲ್ಲೆ ಮುಗ್ಗರಿಸಿ ಬಿದ್ದ ಟೀಮ್ ಇಂಡಿಯಾ: ಆಸಿಸ್ ವಿರುದ್ಧ 66 ರನ್ಗಳ ಸೋಲು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿ ಬಿದ್ದಿದೆ.ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ 1-0 ಅಂತರದಿಂದ ಮುನ್ನಡೆ ಪಡೆದಿದೆ.
ಸಿಡ್ನಿ ಅಂಗಳದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಓಪನರ್ಸ್ಗಳಾದ ಡೇವಿಡ್ ವಾರ್ನರ್ ಮತ್ತು ನಾಯಕ ಆ್ಯರಾನ್ ಫಿಂಚ್ ಸಾಲಿಡ್ ಓಪನಿಂಗ್ ಕೊಟ್ರು. ಮೊದಲ ವಿಕೆಟ್ಗೆ ಈ ಜೋಡಿ 156 ರನ್ಗಳ ಜೊತೆಯಾಟ ನೀಡಿತು.69 ರನ್ಗಳಿಸಿ ಮುನ್ನಗುತ್ತಿದ್ದ ಡೇವಿಡ್ ವಾರ್ನರ್ ಮೊಹ್ಮದ್ ಶಮಿಗೆ ಬಲಿಯಾದ್ರು. ನಂತರ ಬಂದ ಸ್ಟೀವ್ ಸ್ಮಿತ್ ನಾಯಕ ಆ್ಯರಾನ್ ಫಿಂಚ್ಗೆ ಒಳ್ಳೆ ಸಾಥ್ ಕೊಟ್ರು. 108 ರನ್ಗಳ ಜೊತೆಯಾಟ ನೀಡಿದ ಈ ಜೋಡಿ ಟೀಮ್ ಇಂಡಿಯಾ ಬೌಲರ್ಸ್ಗಳ ಬೆವರಿಳಿಸಿದ್ರು.117 ಎಸೆತ ಎದುರಿಸಿದ ಸ್ಮಿತ್ ಶತಕ ಸಿಡಿಸಿ ಸಂಭ್ರಮಿಸಿದ್ರು.ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 17ನೇ ಸತಕ ಸಿಡಿಸಿ ಸಂಭ್ರಮಿಸಿದ್ರು.
105 ರನ್ಗಳಿಸಿದ್ದ ಫಿಂಚ್ ಬೂಮ್ರಾಗೆ ವಿಕೆಟ್ ಒಪ್ಪಿಸಿ ಹೊರ ನಡೆದ್ರು. ಫಿಂಚ್ ಔಟಾದ ನಂತರ ಸ್ಟೀವ್ ಸ್ಮಿತ್ ಅಬ್ಬರದ ಬ್ಯಾಟಿಂಗ್ ಮಾಡಿದ್ರು. ಕೇವಲ 62 ಎಸೆತದಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ರು. ಇದರೊಂದಿಗೆ ಆಸ್ಟ್ರೇಲಿಯಾ ಪರ ಮೂರನೇ ಅತಿ ವೇಗದ ಶತಕ ಪೂರೈಸಿದ ಸಾಧನೆ ಮಾಡಿದ್ರು. ಆಲ್ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಡಕ್ಔಟ್ ಆದ್ರೆ, ಗ್ಲೇನ್ ಮ್ಯಾಕ್ಸ್ವೆಲ್ 45 ರನ್ಗಳಿಸಿದ್ರು. ಲಾಬುಶಾನೆ 2 , ಅ್ಯಲೆಕ್ಸ್ ಕ್ಯಾರಿ ಅಜೇಯ 17 ರನ್ ಗಳಿಸಿದ್ರು. ಕೊನೆಗೆ ಆಸ್ಟ್ರೇಲಿಯಾ ನಿಗದಿತ 50 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಗಳಿಸಿತು.
375 ರನ್ಗಳ ಬಿಗ್ ಟಾರ್ಗೆಟ್ ಬೆನ್ನತ್ತಿದ ಟೀಮ್ಇಂಡಿಯಾಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ ಮೊದಲ ವಿಕೆಟ್ಗೆ 53 ರನ್ಗಳ ಓಪನಿಂಗ್ ಕೊಟ್ರು. ಆದ್ರೆ ದಾಳಿಗಿಳಿದ ಹೆಜ್ಲ್ವುಡ್ ಮಯಾಂಕ್ ಅಗರ್ವಾಲ್ , ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರನ್ನ ಪೆವಲಿಯನ್ಗೆ ಅಟ್ಟಿದ್ರು. 101 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನೆರವಾಗಿದ್ದು ಶಿಖರ್ ಧವನ್ ಮತ್ತು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ. ಆಸಿಸ್ ಬೌಲರ್ಸ್ಗಳನ್ನ ಚೆಂಡಾಡಿದ ಈ ಜೋಡಿ 128 ರನ್ಗಳ ಜೊತೆಯಾಟ ನೀಡಿ ಗೆಲುವಿನ ಭರವಸೆ ನಿಡಿತು. ಆದರೆ ನಂತರ ದಾಳಿಗಿಳಿದ ಸ್ಪಿನ್ನರ್ ಆ್ಯಡಾಮ್ ಜಾಂಪ 74 ರನ್ಗಳಿಸಿದ್ದ ಧವನ್ ಜಾಂಪಾಗೆ ಬಲಿಯಾದ್ರು.
90 ರನ್ಗಳಿಸಿದ್ದ ಹಾರ್ದಿಕ್ ಪಾಂಡ್ಯ ಕೂಡ ಜಾಂಪಾಗೆ ವಿಕೆಟ್ ಒಪ್ಪಿಸಿದ್ರು. ಕೊನೆಯಲ್ಲಿ ಸೈನಿ 29, ಮೊಹ್ಮದ್ಶಮಿ 13 ರನ್ಗಳಿಸಿದ್ರು. ಟೀಮ್ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿತು. ಆಸ್ಟ್ರೇಲಿಯಾ 66 ರನ್ಗಳ ಭರ್ಜರಿ ಗೆಲುವು ಸಾಧಿಸಿತು. ಸ್ಟೀವ್ ಸ್ಮಿತ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?