Featured
ಬೆಳಗ್ಗೆ ಗೋಬಿ ಮಾರಾಟ, ರಾತ್ರಿ ಕಳ್ಳತನದ ದಂಧೆ: ವಿಜಯಪುರದಲ್ಲಿ ಖತರ್ನಾಕ್ ಕಳ್ಳರ ಬಂಧನ

ರೈಸಿಂಗ್ ಕನ್ನಡ :
ವಿಜಯಪುರ :
ಮನೆಗಳ್ಳತನ ಮಾಡುತ್ತಿದ್ದ ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸುವಲ್ಲಿ ವಿಜಯಪುರದ ಜಲನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 12ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ಅಟೋ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಗೋಬಿಮಂಚೂರಿ ಮಾರಾಟ ಮಾಡುತ್ತಿದ್ದ ಗಣೇಶ ನಗರ ನಿವಾಸಿ ಕಿರಣ ವಿಶಾಲ ಶರ್ಮಾ, ಅಟೋರಿಕ್ಷಾ ಚಾಲಕ ವಿರೇಶ ಶಿವಾನಂದ ಬಂಥನಾಳ ಹಾಗೂ ಇನ್ನೊಬ್ಬ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ.
ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಅಟೋದಲ್ಲಿ ಮನೆಗೆ ಬರುವ ಇವರು ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು.
ಜಲನಗರ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣ ಹಾಗೂ ಗಾಂಧಿಚೌಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಆರೋಪಿಗಳಿಂದ 190 ಗ್ರಾಂ ಚಿನ್ನ ಮತ್ತು 145 ಗ್ರಾಂ ಬೆಳ್ಳಿ ಜತೆಗೆ 1.50 ಲಕ್ಷ ರೂ ನಗದು, ಒಂದು ಲ್ಯಾಪಟ್ಯಾಪ್, ಒಂದು ಕ್ಯಾಮರಾ ವಶ ಪಡಿಸಿಕೊಂಡಿದ್ದಾರೆ.
ಪ್ರಕರಣ ಭೇದಿಸಿದ ಎಲ್ಲ ಪೊಲೀಸ್ ಸಿಬ್ಬಂದಿಗೆ ಎಸ್ಪಿ ಅನುಪಮ್ ಅಗರವಾಲ್ ಬಹುಮಾನ ಘೋಷಿಸಿದ್ದಾರೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್