ಸಿನಿಮಾ
ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!

ರಾಯಚೂರು: ಹಿರಿಯ ನಟ ದ್ವಾರಕೀಶ್ (Dwarakish) ಅಪಾರ ಬಂಧು ಮಿತ್ರರು, ಸ್ನೇಹಿತರು ಅಭಿಮಾನಿ ಬಳಗವನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ತಾವು ಜೀವಿಸಿದ ಅಪಾರ ಏಳು ಬೀಳುಗಳನ್ನು ಕಂಡ ‘ಪ್ರಚಂಡ ಕುಳ್ಳ’ನಿಗೂ ಮಂತ್ರಾಲಯಕ್ಕೂ (Mantralaya) ಅವಿನಾಭಾವ ಸಂಬಂಧವಿದೆ.
ನಟ ದ್ವಾರಕೀಶ್ ಅವರು ಬಿಡುವಿನ ಸಮಯದಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಯ ದರ್ಶನವನ್ನು ಪಡೆಯುತ್ತಿದ್ದರು. ರಾಯರ ಭಕ್ತರಾಗಿದ್ದ ದ್ವಾರಕೀಶ್ ಅವರು ಮಂತ್ರಾಲಯದಲ್ಲಿ ಗೆಸ್ಟ್ ಹೌಸ್ ನಿರ್ಮಿಸಿರುವುದು ಈಗ ಬೆಳಕಿಗೆ ಬಂದಿದೆ. ಮಂತ್ರಾಲಯದಲ್ಲಿ ಡಾ.ರಾಜ್ಕುಮಾರ್ ಗೆಸ್ಟ್ ಹೌಸ್ ಪಕ್ಕದಲ್ಲೇ, ದ್ವಾರಕೀಶ್ ಗೆಸ್ಟ್ ಹೌಸ್ ಇದೆ.
ದ್ವಾರಕೀಶ್ ಅವರು ಮಂತ್ರಾಲಯಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಗೆಸ್ಟ್ ಹೌಸ್ ನಿರ್ಮಾಣ ಮಾಡಿದ್ದರು. ರಾಯರ ಪರಮ ಭಕ್ತರಾಗಿದ್ದ ದ್ವಾರಕೀಶ್ ಸುಮಾರು 40 ವರ್ಷಗಳ ಹಿಂದೆಯೇ ಗೆಸ್ಟ್ ಹೌಸ್ನ್ನು ಮಂತ್ರಾಲಯದಲ್ಲಿ ನಿರ್ಮಾಣ ಮಾಡಿದ್ದರು. ‘ಆಶೀರ್ವಾದ’ ಹೆಸರಿನಲ್ಲಿ ಮಂತ್ರಾಲಯದಲ್ಲಿ ಗೆಸ್ಟ್ ಹೌಸ್ ನಿರ್ಮಿಸಲಾಗಿತ್ತು. ಮಂತ್ರಾಲಯದಲ್ಲಿ ಕ್ವಾರಿಡಾರ್ ಬದಿಯಲ್ಲಿಯೇ ಈ ಗೆಸ್ಟ್ ಹೌಸ್ ಇದೆ.
ಇಂದು ನಮ್ಮನ್ನು ಅಗಲಿದ ಹಿರಿಯ ನಟ ದ್ವಾರಕೀಶ್ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ನಿರ್ಧಾರ ಮಾಡಿರುವುದಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದ್ದಾರೆ. ಎಲ್ಲರೂ ಸಹಕಾರ ನೀಡುವಂತೆ ಮನವಿ ಸಹ ಮಾಡಿಕೊಂಡಿದ್ದಾರೆ.
ನಾಳೆ ಒಂದು ದಿನ ಸಿನಿಮಾ ಚಟುವಟಿಕೆಗಳನ್ನು ನಿಲ್ಲಿಸಿ, ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸೋಣ, ಅವರನ್ನು ಗೌರವಯುತವಾಗಿ ಕಳಿಸಿಕೊಡೋಣ ಎಂದ್ರು. ಅಲ್ಲದೇ ಅಲ್ಲದೇ ದ್ವಾರಕೀಶ್ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೂ ಮಾತಾಡುವೆ ಎಂದು ಎನ್,ಎಂ ಸುರೇಶ್ ಹೇಳಿದ್ರು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?