ರಾಯಚೂರು: ಹಿರಿಯ ನಟ ದ್ವಾರಕೀಶ್ (Dwarakish) ಅಪಾರ ಬಂಧು ಮಿತ್ರರು, ಸ್ನೇಹಿತರು ಅಭಿಮಾನಿ ಬಳಗವನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ತಾವು ಜೀವಿಸಿದ ಅಪಾರ ಏಳು ಬೀಳುಗಳನ್ನು ಕಂಡ ‘ಪ್ರಚಂಡ ಕುಳ್ಳ’ನಿಗೂ ಮಂತ್ರಾಲಯಕ್ಕೂ (Mantralaya) ಅವಿನಾಭಾವ ಸಂಬಂಧವಿದೆ.
ನಟ ದ್ವಾರಕೀಶ್ ಅವರು ಬಿಡುವಿನ ಸಮಯದಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಯ ದರ್ಶನವನ್ನು ಪಡೆಯುತ್ತಿದ್ದರು. ರಾಯರ ಭಕ್ತರಾಗಿದ್ದ ದ್ವಾರಕೀಶ್ ಅವರು ಮಂತ್ರಾಲಯದಲ್ಲಿ ಗೆಸ್ಟ್ ಹೌಸ್ ನಿರ್ಮಿಸಿರುವುದು ಈಗ ಬೆಳಕಿಗೆ ಬಂದಿದೆ. ಮಂತ್ರಾಲಯದಲ್ಲಿ ಡಾ.ರಾಜ್ಕುಮಾರ್ ಗೆಸ್ಟ್ ಹೌಸ್ ಪಕ್ಕದಲ್ಲೇ, ದ್ವಾರಕೀಶ್ ಗೆಸ್ಟ್ ಹೌಸ್ ಇದೆ.
ದ್ವಾರಕೀಶ್ ಅವರು ಮಂತ್ರಾಲಯಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಗೆಸ್ಟ್ ಹೌಸ್ ನಿರ್ಮಾಣ ಮಾಡಿದ್ದರು. ರಾಯರ ಪರಮ ಭಕ್ತರಾಗಿದ್ದ ದ್ವಾರಕೀಶ್ ಸುಮಾರು 40 ವರ್ಷಗಳ ಹಿಂದೆಯೇ ಗೆಸ್ಟ್ ಹೌಸ್ನ್ನು ಮಂತ್ರಾಲಯದಲ್ಲಿ ನಿರ್ಮಾಣ ಮಾಡಿದ್ದರು. ‘ಆಶೀರ್ವಾದ’ ಹೆಸರಿನಲ್ಲಿ ಮಂತ್ರಾಲಯದಲ್ಲಿ ಗೆಸ್ಟ್ ಹೌಸ್ ನಿರ್ಮಿಸಲಾಗಿತ್ತು. ಮಂತ್ರಾಲಯದಲ್ಲಿ ಕ್ವಾರಿಡಾರ್ ಬದಿಯಲ್ಲಿಯೇ ಈ ಗೆಸ್ಟ್ ಹೌಸ್ ಇದೆ.
ಇಂದು ನಮ್ಮನ್ನು ಅಗಲಿದ ಹಿರಿಯ ನಟ ದ್ವಾರಕೀಶ್ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ನಿರ್ಧಾರ ಮಾಡಿರುವುದಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದ್ದಾರೆ. ಎಲ್ಲರೂ ಸಹಕಾರ ನೀಡುವಂತೆ ಮನವಿ ಸಹ ಮಾಡಿಕೊಂಡಿದ್ದಾರೆ.
ನಾಳೆ ಒಂದು ದಿನ ಸಿನಿಮಾ ಚಟುವಟಿಕೆಗಳನ್ನು ನಿಲ್ಲಿಸಿ, ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸೋಣ, ಅವರನ್ನು ಗೌರವಯುತವಾಗಿ ಕಳಿಸಿಕೊಡೋಣ ಎಂದ್ರು. ಅಲ್ಲದೇ ಅಲ್ಲದೇ ದ್ವಾರಕೀಶ್ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೂ ಮಾತಾಡುವೆ ಎಂದು ಎನ್,ಎಂ ಸುರೇಶ್ ಹೇಳಿದ್ರು.
ಕಾಫಿ ಜೊತೆ 1 ಸ್ಪೂನ್ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!
ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ
ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!
ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
ಭಗವಾನ್ ರಾಮನಿಗೆ ಈ ವಸ್ತುಗಳನ್ನ ಅರ್ಪಿಸಿ, ಸಂತೋಷ-ಸಮೃದ್ಧಿ ಸಿಗುತ್ತೆ