Connect with us

ರಾಜ್ಯ

ಹೊಸ ಕಾರಿನಲ್ಲಿ ಇರಲೇಬೇಕು ಈ ಸೇಫ್ಟಿ: ಇಲ್ಲದಿದ್ದರೆ, ಕಾರು ಖರೀದಿಸಬೇಡಿ!

Autu expo : ಪ್ರಯಾಣಿಕರ ಕಾರು ಉತ್ಪಾದನೆಯಲ್ಲಿ ಜಪಾನ್ ಹಿಂದಿಕ್ಕುವ ಮೂಲಕ ಸದ್ಯ 3ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿರುವ ಭಾರತದಲ್ಲಿ ಗುಣಮಟ್ಟ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಹೆಚ್ಚುತ್ತಿರುವ ಅಪಘಾತಗಳ ಸಂಖ್ಯೆಯನ್ನು ತಗ್ಗಿಸಲು ಮತ್ತು ಅಪಘಾತದ ತೀವ್ರತೆಯನ್ನು ತಡೆದು ಪ್ರಾಣಹಾನಿ ಕಡಿಮೆಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸುರಕ್ಷತೆಯನ್ನು ಹಂತ-ಹಂತವಾಗಿ ಉನ್ನತೀಕರಿಸಲಾಗುತ್ತಿದೆ.

ಭಾರತದಲ್ಲಿ ಕಳೆದ ಐದಾರು ವರ್ಷಗಳಿಂದ ಹೊಸ ಕಾರುಗಳಲ್ಲಿನ ಸುರಕ್ಷಾ ಸೌಲಭ್ಯಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಹಿಂದೆಂದೂ ಕಾಣದ ಹಲವಾರು ಬದಲಾವಣೆಗಳಾಗಿವೆ. 2017ರಲ್ಲಿ ಪರಿಚಯಿಸಲಾದ ಬಿಎಸ್ 3 ಮಾಲಿನ್ಯ ನಿಯಂತ್ರಣ ಮಾನದಂಡಗಳ ಜಾರಿ ನಂತರ ಕಾರುಗಳ ಸುರಕ್ಷತೆಯಲ್ಲಿ ಹೊಸ ಪರ್ವವೇ ಆರಂಭವಾಗಿದ್ದು, ಇದೀಗ ಬಿಎಸ್ 6, 2ನೇ ಹಂತದವರೆಗೆ ಹೊಸ ಕಾರುಗಳಲ್ಲಿ ಹಲವಾರು ಕಡ್ಡಾಯ ಸುರಕ್ಷಾ ಫೀಚರ್ಸ್ ಗಳನ್ನು ನೀಡಲಾಗುತ್ತಿದೆ.

ರಸ್ತೆ ಅಪಘಾತಗಳಲ್ಲಿನ ಪ್ರಾಣಹಾನಿ ಸಂಖ್ಯೆ ಮತ್ತು ಕಾರಣಗಳನ್ನು ಆಧರಿಸಿ ಇದೀಗ ಮತ್ತೊಂದು ಕಡ್ಡಾಯ ಸುರಕ್ಷಾ ಸೌಲಭ್ಯವನ್ನು ಜಾರಿಗೆ ತರಲಾಗುತ್ತಿದ್ದು, ಮುಂಬರುವ 2025ರ ಏಪ್ರಿಲ್ 1ರಿಂದ ಪ್ರತಿಯೊಂದು ಕಾರಿನಲ್ಲೂ ಹಿಂಬದಿನ ಆಸನಗಳಲ್ಲಿ ಸೀಟ್ ಬೆಲ್ಟ್ ಅಲಾರಾಂ ಜೋಡಣೆಯಾಗಲಿದೆ. ಹಿಂಬದಿಯ ಆಸನದಲ್ಲಿನ ಸೀಟ್ ಬೆಲ್ಟ್ ಅಲಾರಂ ಸೌಲಭ್ಯವು ಈಗಾಗಲೇ ಹಲವಾರು ಹೈ ಎಂಡ್ ಕಾರುಗಳಲ್ಲಿ ಜೋಡಣೆ ಮಾಡಲಾಗುತ್ತಿದ್ದು, ಇನ್ಮುಂದೆ ಅದು ಎಲ್ಲಾ ಮಾದರಿಯ ಕಾರುಗಳಲ್ಲೂ ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.

ಹಿಂಬದಿಯ ಸೀಟ್ ಬೆಲ್ಟ್ ಅಲಾರಂ ಸೌಲಭ್ಯವು ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಧರಿಸಿರುವುದನ್ನು ಖಚಿತಪಡಿಸಲಿದ್ದು, ಸೀಟ್ ಬೆಲ್ಟ್ ಧರಿಸದೇ ಇದ್ದಲ್ಲಿ ಅಲಾರಂ ಮೂಲಕ ಎಚ್ಚರಿಸುತ್ತದೆ. ಹೀಗಾಗಿ ಹೊಸ ಸುರಕ್ಷಾ ಸೌಲಭ್ಯವು ಅಪಘಾತಗಳ ತೀವ್ರತೆಯನ್ನು ತಗ್ಗಿಸುವ ಮೂಲಕ ಸಾವು ನೋವಿನ ಪ್ರಮಾಣವನ್ನು ತಗ್ಗಿಸಲು ನೇರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸುರಕ್ಷಾ ಸೌಲಭ್ಯವನ್ನು ಜಾರಿಗೊಳಿಸಿದ ನಂತರ ಪ್ರಯಾಣಿಕರು ಕಡ್ಡಾಯವಾಗಿ ಪಾಲನೆ ಮಾಡಬೇಕಿದ್ದು, ಸೀಟ್ ಬೆಲ್ಟ್ ಧರಿಸದ ಪ್ರಯಾಣಿಕರಿಗೆ ರೂ. 1 ಸಾವಿರ ತನಕ ದಂಡ ವಿಧಿಸುವ ಬಗ್ಗೆ ಸುಳಿವು ನೀಡಲಾಗಿದೆ. ಇದಕ್ಕಾಗಿ ಮೋಟಾರ್ ವಾಹನ ಕಾಯ್ದೆಯಲ್ಲಿ ತಿದ್ದುಪಡಿ ಸಹ ತರಲಾಗಿದ್ದು, ಈ ಮೂಲಕ ಇದು ಅಪಘಾತಗಳ ತೀವ್ರತೆ ತಡೆಯವಲ್ಲಿ ಸಾಕಷ್ಟು ಸಹಕಾರಿಯಾಗಲಿದೆ ಎನ್ನಲಾಗಿದೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ