Featured
ಕೃಷಿ ಹೊಂಡದಲ್ಲಿ ಮೂವರು ಬಾಲಕರ ದುರ್ಮರಣ:ಮೃತರ ಕುಟುಂಬಕ್ಕೆ ಪರಿಹಾರ ಕೊಟ್ಟ ಸಚಿವ ಪ್ರಭು ಚವ್ಹಾಣ್
![](https://risingkannada.com/wp-content/uploads/2020/08/bidar-2.jpg)
ರೈಸಿಂಗ್ ಕನ್ನಡ:
ಬೀದರ್:
ಕಳೆದ ಕೆಲ ದಿನಗಳ ಹಿಂದೆ ಭಾಲ್ಕಿ ತಾಲೂಕಿನ ಚಳಕಾಪುರವಾಡಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ಮನೆಗೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಮೃತ ಕುಟುಂಬದ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಿ ಪರಿಹಾರ ನೀಡಿದರು.
ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಆಘಾತದಲ್ಲಿದ್ದ ರೈತನ ಕುಟುಂಬದ ಸದಸ್ಯರಿಗೆ ಸಚಿವರು ಇದೆ ವೇಳೆಯಲ್ಲಿ ಸಾಂತ್ವನ ಹೇಳಿದರು. ಘಟನೆಯ ಕುರಿತು ಕುಟುಂಬದವರಿಂದ ಮಾಹಿತಿ ಪಡೆದುಕೊಂಡ ಸಚಿವರು, ಇಡೀ ಕುಟುಂಬಕ್ಕೆ ಆಧಾರಸ್ಥಂಬದಂತಿದ್ದ, ಹೆತ್ತ ಮಕ್ಕಳನ್ನು ಕಳೆದುಕೊಂಡು ತಾವು ದುಃಖದಲ್ಲಿದ್ದೀರಿ. ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಹೇಳಿದ ಸಚಿವರು, ರೈತ ಧೂಳಪ್ಪ ಬನ್ನಾಳೆ ಮತ್ತು ಕುಟುಂಬದ ಪರಿವಾರದವರಿಗೆ ಧೈರ್ಯ ತುಂಬಿದರು.
![](https://risingkannada.com/wp-content/uploads/2020/08/yadgiri-krushi-1-1024x768.jpg)
ಈ ಬಗ್ಗೆ ಮಾತನಾಡಿದ ಸಚಿವರು, ಮೂವರು ಮಕ್ಕಳು ನೀರಿನಲ್ಲಿ ಸಮಾಧಿಯಾಗಿ, ಅವರನ್ನು ಕಳೆದುಕೊಂಡದ್ದಕ್ಕಾಗಿ ಕುಟುಂಬದ ಎಲ್ಲ ಸದಸ್ಯರು ದುಃಖದಲ್ಲಿದ್ದಾರೆ. ಅವರಿಗೆ ಸಾಕಷ್ಟು ಆಘಾತವಾಗಿದೆ. ಈ ಸುದ್ದಿ ಕೇಳಿ ತಮ್ಮ ಮನಸಿಗೆ ಕೂಡ ಬಹಳಷ್ಟು ನೋವಾಯಿತು. ಈ ಘಟನೆಯಿಂದ ಈ ಗ್ರಾಮಸ್ಥರಷ್ಟೇ ಅಲ್ಲ, ಇಡೀ ಜಿಲ್ಲೆಯ ಜನರು ದುಃಖದಲ್ಲಿದ್ದಾರೆ ಎಂದರು.
ವ್ಯವಸಾಯಕ್ಕಾಗಿ ಆಕಳು:
ಕುಟುಂಬದವರಿಗೆ ಭೇಟಿ ಮಾಡಿದ ವೇಳೆಯಲ್ಲಿ ಸಚಿವರು ತಮ್ಮ ಕಡೆಯಿಂದ ಕುಟುಂಬದವರಿಗೆ ವೈಯಕ್ತಿಕವಾಗಿ 51,000 ರೂ.ಗಳನ್ನು ನೀಡಿದರು. ಬಡ ರೈತ ಕುಟುಂಬಕ್ಕೆ ಆಸರೆಯಾಗಲೆಂದು, ಕುಟುಂಬದವರು ವ್ಯವಸಾಯ ಮಾಡಲು ಸಹಕಾರಿಯಾಗಲೆಂದು ತಮ್ಮ ಕಡೆಯಿಂದ ಎರಡು ಆಕಳುಗಳನ್ನು ಶೀಘ್ರ ಕೊಡುವುದಾಗಿ ಸಚಿವರು ತಿಳಿಸಿದರು. ನಿಮ್ಮ ಮಗಳ ಮದುವೆಗೆ ಕೂಡ ಸಹಾಯ ಮಾಡುತ್ತೇನೆ ಎಂದು ತಿಳಿಸಿ ಸಚಿವರು ಕುಟುಂಬದವರಿಗೆ ಧೈರ್ಯ ತುಂಬಿದರು.
ಈ ವೇಳೆ ಭಾಲ್ಕಿ ತಹಸೀಲ್ದಾರ ಅಣ್ಣಾರಾವ್ ಪಾಟೀಲ ಹಾಗೂ ಇತರರು ಇದ್ದರು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್