Featured
ಭಾರತೀಯ ಸೇನೆ ಗುಂಡಿಗೆ ಮೂವರು ಉಗ್ರರು ಮಟಾಶ್: ಪಾಪಿ ಪಾಕ್ ಕೈವಾಡ ಬಹಿರಂಗ

ರೈಸಿಂಗ್ ಕನ್ನಡ:
ನ್ಯೂಸ್ಡೆಸ್ಕ್:
ಖಚಿತ ಮಾಹಿತಿ ಆಧಾರದ ಮೇಲೆ ಬೆಳ್ಳಂ ಬೆಳಗ್ಗೆ ಶ್ರೀನಗರದ ಬಾಟಾಮಲೂ ಪ್ರದೇಶದಲ್ಲಿ ದಾಳಿ ನಡೆಸಿದ ಭಾರತೀಯ ಮೂರು ಉಗ್ರರನ್ನ ಎನ್ಕೌಂಟರ್ ಮಾಡಿದ್ದಾರೆ.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಉಗ್ರರು ಸೇನೆ ಮೇಲೆ ಏಕಾಏಕಿ ದಾಳಿ ನಡೆಸಿದರು.
ಪ್ರತಿ ದಾಳಿ ನಡೆಸಿದ ಭದ್ರತಾ ಪಡೆಗಳು ಮೂವರು ಉಗ್ರರನ್ನ ಸದೆಬಡಿಯಲು ಯಶಸ್ವಿಯಾದರು. ಹತರಾಗಿರುವ ಈ ಉಗ್ರರು ಶ್ರೀನಗದರಲ್ಲಿ ಸೇನೆ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.
ಗುಪ್ತಚರ ಮಾಹಿತಿ ಪ್ರಕಾರ ಪಾಕಿಸ್ತಾನದ ಬೇಹುಗಾರಿಕ ಸಂಸ್ಥೆ (ಐಎಸ್ಐ) ತನ್ನ ಉಪಸ್ಥಿತಿಯನ್ನ ತೋರಿಸುವುದಕ್ಕಾಗಿ ದಾಳಿಗಳನ್ನ ಮಾಡಿಸುತ್ತಿದೆ ಎಂದು ತಿಳಿದು ಬಂದಿದೆ.
ಶ್ರೀನಗರ ಈಗ ಉಗ್ರರ ಹಾಟ್ಸ್ಪಾಟ್ ಆಗಿದೆ. ಕಳೆದ ಕೆಲವು ದಿನಗಳಿಂದ ಉಗ್ರರು ಶ್ರೀನಗರದಲ್ಲಿರುವ ಸೇನೆ ಮೇಲೆ ದಾಳಿ ಮಾಡಲು ಹೊಂಚು ಹಾಕುತ್ತಿವೆ. ಈವರೆಗೂ ಈ ಪ್ರದೇಶದಲ್ಲಿ ಅಶಾಂತಿ ಮೂಡಿಸುವುದಕ್ಕಾಗಿ ಉಗ್ರರು ಐದು ಬಾರಿ ವಿಫಲ ಪ್ರಯತ್ನ ಮಾಡಿದ್ದಾರೆ. ಬರೀ ಶ್ರೀನಗರದಲ್ಲೆ 12 ಉಗ್ರರನ್ನ ಹತ್ಯೆ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?