Connect with us

ರಾಜಕೀಯ

ಶೋಭಾಗೆ ಟಿಕೆಟ್: ಬಿಎಸ್ ವೈ ಬೆಂಬಲ-ವಿ-ರಾಘಿಗಳ ಅಡ್ಡಗಾಲು

ಚಿಕ್ಕಮಗಳೂರು : ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಲೋಕಾ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಒಂದು ಕಡೆ ಸಿಟಿ ರವಿ ಬೆಂಬಲಿಗರು ಗೋ ಬ್ಯಾಕ್ ಶೋಭಾ ಅಭಿಯಾನ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಪ್ರಮೋದ್ ಮಧ್ವರಾಜ್ ಅಭಿಮಾನಿಗಳು ಟಿಕೆಟ್ ಗಾಗಿ ಗುದ್ದಾಡುತ್ತಿದ್ದಾರೆ.. ಇನ್ನು ಇವರ ನಡುವೆಯೇ ಜಯಪ್ರಕಾಶ್ ಹೆಗ್ಡೆ ಕೂಡ ನಾನು ಆಕಾಂಕ್ಷಿ ಅಂತ ಓಡಾಡುತ್ತಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವ ಕೂತುಹಲ ಹೆಚ್ಚಾಗುತ್ತಿದೆ.

ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಶೋಭಾ ಕರಂದ್ಲಾಜೆ ಪಾಲಾಗೋದು ಬಹುತೇಕ ಖಚಿತವಾಗಿದೆ. ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಉಡುಪಿ ಚಿಕ್ಕಮಗಳೂರು ಬಿಜೆಪಿಯೊಳಗೆ ಆಂತರಿಕ ಕಲಹಗಳು ಶುರುವಾಗಿವೆ. ಇನ್ನು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಎದ್ದು ಕಾಣುತ್ತಿದ್ದರೆ, ಬಿಜೆಪಿ ಭದ್ರಕೋಟೆ ಎನಿಸಿಕೊಂಡಿರುವ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಮುಸುಕಿನ ಗುದ್ದಾಟ ಆರಂಭವಾಗಿದೆ.

ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಶೋಭಕ್ಕನ ಬೆನ್ನ ಹಿಂದೆ ಸ್ವತಃ ಯಡಿಯೂರಪ್ಪನವರೇ ಇರ್ತಾರೆ ಅನ್ನೋದು ಗುಟ್ಟೇನಲ್ಲ. ಆದ್ರೆ, ಶೋಭಾ ಕರಂದ್ಲಾಜೆಗೆ ಟಿಕೆಟ್ ತಪ್ಪಿಸೋ ಶತಪ್ರಯತ್ನಗಳು ಬಿಜೆಪಿಯಲ್ಲೇ ನಡೆಯುತ್ತಿವೆ. ಅದ್ರಲ್ಲೂ ಬಿವೈ ವಿಜಯೇಂದ್ರ ಹಾಗೂ ಬಿವೈ ರಾಘವೇಂದ್ರ ಇಬ್ಬರಿಗೂ ಕೂಡ ಶೋಭಾ ಕರಂದ್ಲಾಜೆ ಹೆಸರು ಕೇಳಿದ್ರೆ ಆಗಿಬರೋದಿಲ್ಲ ಅನ್ನೋದು ಕೂಡ ಗುಟ್ಟೇನಲ್ಲ. ಸುಳ್ಯದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿದ್ದ ಶೋಭಾ, ಯಡಿಯೂರಪ್ಪರ ಕೃಪಾರ್ಶಿವಾದ ಸಿಕ್ಕಿದ ಬಳಿಕ ಒಂದೊಂದೆ ಹಂತ ಬೆಳೆದವರು.

ಶಾಸಕಿಯಾಗಿ, ರಾಜ್ಯ ಸಚಿವೆಯಾಗಿ, ಕೇಂದ್ರದ ಸಚಿವೆಯಾಗಿ ರಾಜಕೀಯದಲ್ಲಿ ಬೆಳೆಯಲು ಯಡಿಯೂರಪ್ಪರೇ ಕಾರಣ ಅನ್ನೋದುವಾಸ್ತವ.. ಇದೇ ಶೋಭಾ ಕರಂದ್ಲಾಜೆಯಿಂದಾಗಿ ಕುಟುಂಬದಲ್ಲಿ ಬಿರುಕು ಬಂದಿದ್ದು, ಯಡಿಯೂರಪ್ಪನವರ ಮನೆಯೊಂದು ಮೂರು ಬಾಗಿಲಾಗಿದ್ದು, ಅನ್ನೋ ಸಿಟ್ಟು, ಯಡಿಯೂರಪ್ಪನವರ ಮಕ್ಕಳಲ್ಲಿದೆ. ಹೀಗಾಗಿ ಶೋಭಾ ಕರಂದ್ಲಾಜೆಯನ್ನ ರಾಜಕೀಯವಾಗಿ ಮುಗಿಸೋಕೆ ಸ್ವತಃ ವಿ-ರಾಘಿಗಳು ಯತ್ನಿಸುತ್ತಲೇ ಇದ್ದಾರೆ. ಆದ್ರೆ, ಯಡಿಯೂರಪ್ಪ ಮಾತ್ರ ಯಾರು ಏನೇ ಮಾತಾಡಿಕೊಂಡ್ರು ಶೋಭಾ ಕರಂದ್ಲಾಜೆಯನ್ನ ಸೈಡ್ ಲೈನ್ ಮಾಡೋಕೆ ತಯಾರಿಲ್ಲ..ಹೀಗಾಗಿ ಇದೀಗ ಲೋಕಾ ಟಿಕೆಟ್ ಫೈನಲ್ ಮಾಡಿಸಿಕೊಂಡು ಬರೋಕೆ ದೆಹಲಿಗೆ ಹೊರಟಿರುವ ಯಡಿಯೂರಪ್ಪ ಬಾಯಿಂದ ಬರುವ ಮೊದಲ ಹೆಸರೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆಯದ್ದು.

Advertisement

2ನೇ ಬಾರಿ ಸಂಸದೆಯಾಗಿ, ಕೇಂದ್ರ ಮಂತ್ರಿಯೂ ಆಗಿರುವ ಶೋಭಾ, ತಮ್ಮ ಇಲಾಖೆಯ ಕೆಲಸಗಳಲ್ಲಿ ಡೆಲ್ಲಿಯಲ್ಲಿಯೇ ವ್ಯಸ್ತಾವ್ಯ ಹೂಡಿ ಉಡುಪಿ, ಚಿಕ್ಕಮಗಳೂರು ಕಡೆ ಬಂದದ್ದು, ಕಾರ್ಯಕರ್ತರನ್ನು ಭೇಟಿಯಾದದ್ದು ಕಮ್ಮಿ.. ಆದರೂ, ಈ ಬಾರಿಯೂ ತನಗೇ ಟಿಕೇಟ್ ಎಂಬ ದೈರ್ಯದಿಂದ ಇದ್ದಾರೆ. ಈ ಧೈರ್ಯದ ಹಿಂದೆ ಇರೋದು ಯಡಿಯೂರಪ್ಪನವರೇ.. ಇನ್ನು ಶೋಭಾ ಕರಂದ್ಲಾಜೆಗೆ ಟಿಕೆಟ್ ತಪ್ಪಿಸೋಕೆ, ಅಂತಲೇ ಬಿವೈವೈ, ಬಿವೈಆರ್, ಸಿಟಿ ರವಿ, ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮಧ್ವರಾಜ್.. ಪ್ರಯತ್ನ ಮಾಡುತ್ತಲೇ ಇದ್ದಾರೆ. ಕೆಲವರದ್ದು ಬಹಿರಂಗ ಹೋರಾಟ ಮತ್ತೆ ಕೆಲವರದ್ದು, ತೆರೆಮರೆ ಕಸರತ್ತು..ಅಕ್ಕಿ ಮೇಲೆ ಪ್ರೀತಿ ನೆಂಟರ ಮೇಲೆ ಇಷ್ಟ ಎಂಬಂತಾಗಿದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ. ಏನಾಗುತ್ತದೋ ಕಾದು ನೋಡಬೇಕು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ