Featured
ತುಮಕೂರಿನಲ್ಲಿ ಕೊರೊನಾಗೆ ಐವರ ಬಲಿ: 165 ಹೊಸ ಕೇಸ್, 165 ಡಿಸ್ಚಾರ್ಜ್

ರೈಸಿಂಗ್ ಕನ್ನಡ :
ತುಮಕೂರು :
ಜಿಲ್ಲೆಯಲ್ಲಿ ಕೊರೊನಾ ಆರ್ಭಟಿಸಿದ್ದು ಐವರನ್ನ ಬಲಿ ತೆಗೆದುಕೊಂಡಿದೆ. ಇನ್ನು ಸೋಂಕಿನಲ್ಲೂ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಸೋಮವಾರ ಐವರು ಸೊಂಕಿತರು ಮೃತಪಟ್ಟಿದ್ದು ತುಮಕೂರು ತಾಲ್ಲೂಕಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಎಸ್ ಎಸ್ ಪುರಂ ನಿವಾಸಿ 53 ವರ್ಷದ ವ್ಯಕ್ತಿ, ವಿದ್ಯಾನಗರದ 61 ವರ್ಷದ ವೃದ್ದ, ಹಾಗೂ ತಾಲ್ಲೂಕಿನ ಬೊಮ್ಮೆನಹಳ್ಳಿ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ತುರುವೇಕೆರೆ ತಾಲ್ಲೂಕಿನ ದೇವನಾಯ್ಕನಹಳ್ಳಿ ಗ್ರಾಮದ 45 ವರ್ಷದ ಮಹಿಳೆ, ಚಿ ನಾ ಹಳ್ಳಿ ತಾಲ್ಲೂಕಿನ ಹುಳಿಯಾರು ಗ್ರಾಮದಲ್ಲಿ 70 ವರ್ಷದ ವೃದ್ದ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 139 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.
ಸೋಮವಾರ 165 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 4,408 ಕ್ಕೆ ಏರಿಕೆಯಾಗಿದೆ. ಇನ್ನೂ ಇದೇ 165 ಜನ ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು 3,254 ಜನರು ಈವರೆಗೆ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕುವಾರು ಇಂದಿನ ಕೋವಿಡ್ ಪಾಸಿಟಿವ್
ತುಮಕೂರು 40 , ಚಿ ನಾ ಹಳ್ಳಿ 11 , ಪಾವಗಡ 15, ತಿಪಟೂರು 26, ಮದುಗಿರಿ 10, ಕೊರಟಗೆರೆ 4, ಕುಣಿಗಲ್ 19, ತುರುವೇಕೆರೆ 19, ಶಿರಾ 11, ಗುಬ್ಬಿ 10, ಒಟ್ಟು 165 ಸೋಂಕಿತರು ಪತ್ತೆಯಾಗಿದ್ದಾರೆ.
ಇಂದು ಕಂಡು ಬಂದಿರುವ ಸೊಂಕಿತರಲ್ಲಿ 5 ವರ್ಷದ ಒಳಗಿನ ಎರಡು ಮಕ್ಕಳು ಹಾಗೂ 31 ಜನ ವೃದ್ದರು ಸೇರಿದಂತೆ ಸೇರಿದಂತೆ 72 ಜನ ಪುರುಷರು ಹಾಗೂ 93 ಜನ ಮಹಿಳೆಯರಿಗೆ ಇಂದು ಕೊರೊನಾ ಸೊಂಕು ದೃಢಪಟ್ಟಿದೆ.
165 ಜನ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಜಿಲ್ಲೆಯಲ್ಲಿ ಸೋಮವಾರ 165 ಜನ ಸೊಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 3,254 ಜನರು ಕೊವಿಡ್ ನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಉಳಿದ 1,015 ಮಂದಿ ಸಕ್ರಿಯ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರ ಸಂಪರ್ಕದಲ್ಲಿ 66 ಸಾವಿರ ಜನ
ಇನ್ನೂ ಸೊಂಕಿತರ ಪ್ರಥಮ ಹಾಗೂ ದ್ವಿತಿಯ ಸಂಪರ್ಕದಲ್ಲಿ 66,003 ಜನರನ್ನ ನಿಗಾವಣೆಯಲ್ಲಿಡಲಾಗಿದ್ದು ಸೊಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾದ್ಯತೆ ದಟ್ಟವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?