Featured
ತುಮಕೂರಿನಲ್ಲಿ ದ್ವಿಶತಕ ಬಾರಿಸಿದ ಕೊರೊನಾ: ಇಬ್ಬರು ಬಲಿ

ರೈಸಿಂಗ್ ಕನ್ನಡ :
ತುಮಕೂರು:
ಮಹಾಮಾರಿ ಕೊರೊನಾಗೆ ತುಮಕೂರಿನಲ್ಲಿ ಭಅನುವಾರ ದ್ವಿಶತಕ ಬಾರಿಸಿದೆ. ಇನ್ನು ಕ್ರೂರಿ ಹೊಡೆತಕ್ಕೆ ಇಬ್ಬರು ಬಲಿಯಾಗಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿಪಾವಗಡ ತಾಲ್ಲೂಕಿನ ರೆಡ್ಡಿ ಕಾಲೋನಿ ನಿವಾಸಿ65 ವರ್ಷದ ವೃದ್ದ, ಹಾಗೂ ಕುಣಿಗಲ್ ತಾಲ್ಲೂಕು ಎಡೆಯೂರು ಗ್ರಾಮದ 55 ವ್ಯಕ್ತಿ ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ.ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿನಿಂದ ಮೃತಪಟ್ಟವರ ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ
ಜಿಲ್ಲೆಯಲ್ಲಿ ಭಾನುವಾರ 267 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸೊಂಕಿತರ ಸಂಖ್ಯೆ 5,775ಕ್ಕೆ ಏರಿಕೆಯಾಗಿದೆ. ಭಾನುವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದು ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗೇಂದ್ರಪ್ಪ ತಿಳಿಸಿದ್ದಾರೆ.

ತಾಲ್ಲೂಕುವಾರು ಇಂದಿನ ಸೊಂಕಿತರು
ಚಿ ನಾಹಳ್ಳಿ 4,ಗುಬ್ಬಿ 54,ಕೊರಟಗೆರೆ 6,ಕುಣಿಗಲ್ 19,ಮದುಗಿರಿ 13,ಪಾವಗಡ 11,ಶಿರಾ 34,ತಿಪಟೂರು 29,ತುಮಕೂರು 63,ತುರುವೇಕೆರೆ 34 ಹೊಸ ಸೋಂಕಿತರು ಕಾಣಿಸಿಕೊಂಡಿದ್ದಾರೆ.
174 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ತುಮಕೂರು ಜಿಲ್ಲೆಯಲ್ಲಿ ಸೊಂಕಿತರು ಹೆಚ್ಚಾದಂತೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು ಇಂದು 174 ಜನ ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರಗೆ 4,080 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 1,533 ಜನ ಸಕ್ರಿಯ ಸೋಂಕಿತರು ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?