ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಹತ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನ ಉತ್ತರಪ್ರಧೇಶ ಸಿಎಂ ಯೋಗಿ ಆದಿತ್ಯಾನಾಥ್ ಎಸ್ಐಟಿಗೆ ವಹಿಸಿದ್ದಾರೆ. ಏಳು ದಿನದಲ್ಲಿ ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚನೆ ಕೊಟ್ಟಿದ್ದಾರೆ.
ದೆಹಲಿಯಲ್ಲಿ ನಡೆದಿದ್ದ ನಿರ್ಭಯ ಗ್ಯಾಂಗ್ರೇಟ್ ಮಾದರಿಯಲ್ಲೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿಯು ನಡೆದಿದೆ.
ಸೆ.14ರಂದು ಯುವತಿ ತಮ್ಮ ಜಮೀನಿನಲ್ಲಿ ತಾಯಿಯೊಂದಿಗೆ ಮೇವು ತರಲು ಹೋದಾಗ ನಾಲ್ವರು ಕಾಮುಕರು ಆಕೆಯನ್ನ ಎಳೆದೊಯ್ದು ಅತ್ಯಾಚಾರ ಎಸೆಗಿದ್ದಾರೆ. ಕೊನೆಗೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬೆನ್ನು ಮೂಳೆ ಮತ್ತು ಕುತ್ತಿಗೆಗೆ ಹಾನಿ ಮಾಡಿದ್ದಾರೆ.ಜೊತೆಗೆ ನಾಲಗೆಯನ್ನ ಕತ್ತರಿಸಿದ್ದಾರೆ.
ಗಂಭೀರ ಗಾಯಗಳಿಂದ ದೆಹಲಿಯ ಸಫ್ದಾರ್ ಜಂಗ್ ಆಸ್ಪತ್ರೆಗೆ ದಾಖಲಾದ ಯುವತಿ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಕೊನೆಯುಸಿರೆಳೆದಿದ್ದಾಳೆ.ಇದೀಗ ಆರೋಪಿಗಳಿಗೆ ತಕ್ಕ ಪಾಠ ಕಲಿಸಲು ಪಣ ತೊಟ್ಟಿರುವ ಉತ್ತರ ಪ್ರಧೇಶ ಸಿಎಂ ಯೋಗಿ ಆದಿತ್ಯನಾಥ್, ಪ್ರಕರಣದ ತನಿಖೆಯನ್ನ ಎಸ್ಐಟಿಗೆ ವಹಿಸಿದ್ದಾರೆ.
ಯು.ಪಿ.ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ ಭಗವಾನ್ ಸ್ವರೂಪ್, ಚಂದ್ರ ಪ್ರಕಾಶ್, ಡಿಐಜಿ ಅವರನ್ನೊಳಗೊಂಡ ಮೂವರು ಸದಸ್ಯರ ವಿಶೇಷ ತನಿಖಾ ದಳ ತನಿಖೆ ನಡೆಸಲಿದೆ ಎಂದು ಸಿಎಂ ಯೋಗಿ ಆದಿತ್ಯಾನಾಥ್ ಟ್ವೀಟರ್ನಲ್ಲಿ ಮಾಹಿತಿ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?