Featured
ಪ್ರತಿದಿನ ಮೂಸಂಬಿ ಜ್ಯೂಸ್ ಕುಡಿಯುವುದರಿಂದ ಸಿಗುತ್ತೆ ಹಲವು ಪ್ರಯೋಜನಗಳು

ರೈಸಿಂಗ್ ಕನ್ನಡ :- ಮೂಸಂಬಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ವಾದಿಸಲು ಉತ್ತೇಜಿಸುತ್ತದೆ. ಇದರಿಂದ ದೇಹದ ಪ್ರತಿಎಕ್ಷಕಾ ವ್ಯವಸ್ಥೆ ಸುಧಾರಿಸುತ್ತದೆ. ನಮ್ಮ ದೇಹದಲ್ಲಿ ಕಬ್ಬಿನಾಂಶವನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಸೇವನೆ ಉತ್ತಮ. ಅಷ್ಟೇ ಅಲ್ಲದೆ ಶೀತ ಮತ್ತು ಕೆಮ್ಮಿಗೆ ಈ ಹಣ್ಣು ಅತ್ಯುತ್ತಮ ಪರಿಹಾರವಾಗುತ್ತದೆ.
ಹವಾಮಾನದ ಬದಲಾವಣೆ ಸಮಯದಲ್ಲಿ ಶೀತ ,ಜ್ವರ, ಕೆಮ್ಮು ಮತ್ತು ಅಸ್ವಸ್ಥತೆ ಮುಂತಾದ ಸಮಸ್ಯೆಗಳು ಕಾಣಿಸುತ್ತವೆ. ಇದಕ್ಕೆ ಮುಖ್ಯಕಾರಣ ಈ ಸಂದರ್ಭದಲ್ಲಿ ನಾವು ಸೇವಿಸುತ್ತಿರುವ ಆಹಾರ ಎನ್ನಬಹುದು. ಇಂತಹ ಸಮಯದಲ್ಲ ನಾವು ಕೆಲ ಹಣ್ಣು –ಹಂಪಲುಗಳನ್ನು ಸೇವಿದಸುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಇಂತಹ ಹಣ್ಣುಗಳಲ್ಲಿ ಮೂಸಂಬಿ ಕೂಡ ಇಂದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಂ ಹೇರಳವಾಗಿ ಕಂಡುಬರುತ್ತದೆ. ಹಾಗೆಯೇ ಫೈಬರ್ ಅಂಶ ಕೂಡ ಇದರಲ್ಲಿದೆ. ಈ ಹಣ್ಣಿನ ರಸವನ್ನು ಕುಡಿಯುವುದರಿಂದ ಅಥವಾ ಈ ಹಣ್ಣು ತಿನ್ನುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಸ್ಕರ್ವಿ ಒಂದು ಕಾಯಿಲೆಯಾಗಿದ್ದು, ಈ ಸಮಸ್ಯೆ ಕಾಣೀಸಿಕೊಂಡರೆ ಒಸಡುಗಳಿಂದ ರಕ್ತಸ್ರಾವವಾಗುತ್ತದೆ. ಈ ರೋಗವು ವಿಟಮಿನ್ ಸಿ ಕೊರತೆಯಿಂದ ಉಂಟಾಗುತ್ತದೆ. ಮೂಸಂಬಿ ರಸದಲ್ಲಿ ಬಹಳಷ್ಟು ವಿಟಮಿನಗ ಸಿ ಇದ್ದು , ಇದು ಈ ಕಾಯಿಲೆಯನ್ನು ಹೋಗಲಾಡಿಸಲು ಸಹಕಾರಿಯಾಗುತ್ತದೆ.
ಮೂಸಂಬಿ ರಸ ಜೀರ್ಣಕಾರಿ ಚಟುವಟಿಕೆಗೆ ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಆಮ್ಲ ಅಂಶವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಹಾಗೆಯೇ ಹೊಟ್ಟೆಯ ಅನೇಕ ಸಮಸ್ಯೆಗಳನ್ನು ನಿವಾರಸುತ್ತದೆ.
ಮೂಸಂಬಿ ರಸವನ್ನು ಕುಡಿವಿದರಿಂದ , ರಕ್ತ ಪರಿಚಲನೆ ಸರಿಯಾಗಿ ನಡೆಯುತ್ತದೆ. ಹಾಗೆಯೇ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿನಿತ್ಯ ಮೂಸಂಬಿ ರಸವನ್ನು ಕುಡಿಯುವುದರಿಂದ ದೇಹಕ್ಕೆ ರೋಗಗಳ ವಿರಿದ್ದ ಹೋರಾಡುವ ಶಕ್ತಿಯನ್ನು ನೀಡುತ್ತದೆ.
ಈ ಹಣ್ಣು ತಿನ್ನುವುದರಿಂದ ರಕ್ತದ ಜೀವಕೋಶಗಳಲ್ಲಿ ಎಲೆಕ್ಟ್ರೋಲೈಟ್ ಸಮತೋಲನ ಕಾಪಾಡಿಕೊಳ್ಳುವಲ್ಲಿ ಈ ಅಂಶಗಳು ಸಹಾಯಕವಾಗಿದೆ. ಈ ಹಣ್ಣಿನಲ್ಲಿರುವ ಪೊಟಾಶಿಯಂ ಮೆದುಳಿಗೆ ಆಮ್ಲಜನಕವನ್ನು ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಮೂಸಂಬಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ವಾದಿಸಲು ಉತ್ತೇಜಿಸುತ್ತದೆ. ಇದರಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಸುಧಾರಿಸುತ್ತದೆ. ಹಾಗೆಯೇ ದೇಹದಲ್ಲಿ ಕಬ್ಬಿಣಾಂಶವನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಸೇವನೆ ಉತ್ತಮ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?