Connect with us

Featured

ಚಾರುಮತಿಯ ಪುರಾಣ, ವರಮಹಾಲಕ್ಷ್ಮಿಯ ವರ- ಶ್ರಾವಣ ಹಬ್ಬದ ವಿಶೇಷತೆ ಏನು? ತಯಾರಿ ಹೇಗೆ ಮಾಡಬೇಕು..?

ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಮಾಸವಾಗಿದೆ. ಪ್ರತಿಯೊಂದು ಹಬ್ಬದಲ್ಲೂ ಮನೆಯಲ್ಲಿ ಸಡಗರ ಸಂಭ್ರಮದಿಂದ ಕೂಡಿರುತ್ತದೆ. ಅದರಲ್ಲೂ ಶ್ರಾವಣ ಮಾಸದಲ್ಲಿ ಎರಡನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ.

Advertisement

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ


ಪುರಾಣದಲ್ಲಿ ಚಾರುಮತಿ ಎಂಬ ಸ್ತ್ರೀಯೊಬ್ಬಳು ನಿಸ್ವಾರ್ಥವಾಗಿ ತನ್ನ ಅತ್ತೆ-ಮಾವಂದಿರ ಸೇವೆ ಮಾಡುತ್ತಿರುತ್ತಾಳೆ. ಇದನ್ನು ಕಂಡು ಆಕೆಯ ಶ್ರದ್ಧೆಗೆ ಒಲಿದ ಲಕ್ಷ್ಮಿ ಶ್ರಾವಣ ಮಾಸದ ಹುಣ್ಣಿಮೆಗೂ ಮೊದಲ ಶುಕ್ರವಾರ ನನ್ನನ್ನು ಆರಾಧಿಸು, ನಿನ್ನ ಇಷ್ಟಾರ್ಥಗಳನ್ನು ಪೂರೈಸುತ್ತೇನೆ ಎನ್ನುತ್ತಾಳೆ. ಆ ಕಾರಣ ಚಾರುಮತಿ ಶ್ರಾವಣ ಮಾಸದ ಹುಣ್ಣಿಮೆಗೂ ಮೊದಲ ಶುಕ್ರವಾರ ವರಮಹಾಲಕ್ಷ್ಮಿಯನ್ನು ಆರಾಧಿಸಿ ತನ್ನ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳುತ್ತಾಳೆ.

ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದ್ದಾಳೆ ಎನ್ನುವ ಕಥೆಯಿದೆ. ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದಾರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಲಕ್ಷ್ಮೀ ಉದ್ಭವಿಸುತ್ತಾಳೆ. ಆದ್ದರಿಂದಲೇ ಇಷ್ಟಾರ್ಥಗಳನ್ನು ಪೂರೈಸುವ ಲಕ್ಷ್ಮಿಯ ಆರಾಧನೆಗಾಗಿ ಈ ಹಬ್ಬವಾಗಿದೆ. ಪ್ರತಿವರ್ಷವೂ ಲಕ್ಷ್ಮಿಯನ್ನು ಶ್ರದ್ಧೆ-ಭಕ್ತಿಯಿಂದ ಆರಾಧಿಸುವುದರಿಂದ ಸಕಲ ಇಷ್ಟಾರ್ಥವೂ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.

ವೃತ ಹೇಗೆ ಮಾಡಬೇಕು..?

ಲಕ್ಷ್ಮಿ ಎಂದರೆ ಶುದ್ಧತೆಯ ಸಂಕೇತವಾಗಿದೆ. ಹೀಗಾಗಿ ಹಬ್ಬದ ದಿನದಂದು ಮುಂಜಾನೆ ಎದ್ದು ಮನೆಯನ್ನು ಶುಚಿಗೊಳಿಸಿ, ರಂಗೋಲಿ, ತಳಿರು ತೋರಣಗಳಿಂದ ಅಲಂಕರಿಸಿ ಸ್ನಾನ ಮಾಡಿ ಶುಭ್ರವಾದ ಬಟ್ಟೆಯನ್ನು ತೊಟ್ಟು ಮಡಿಯಲ್ಲಿ ನೈವೇದ್ಯವನ್ನು ತಯಾರಿಸಲಾಗುತ್ತದೆ. ಸಣ್ಣ ಉಕ್ಕಿನ ಬಿಂದಿಗೆ ಅಥವಾ ಬೆಳ್ಳಿ ಚೆಂಬನ್ನು ಕಲಶದ ರೂಪದಲ್ಲಿ ಇಟ್ಟು ಅದರಲ್ಲಿ ನೀರನ್ನು ತುಂಬಿಸಿ ಅದಕ್ಕೆ ಸ್ವಲ್ಪ ಖರ್ಜೂರ ಹಾಗೂ ದ್ರಾಕ್ಷಿಯನ್ನು ಹಾಕಬೇಕು. ಒಂದು ತಟ್ಟೆಯಲ್ಲಿ ಅಕ್ಕಿಯನ್ನು ಹರಡಿ ಅದರಲ್ಲಿ ಕಲಶವನ್ನು ಇಟ್ಟು, ಮಾವಿನ ಎಲೆ ಹಾಗೂ ವೀಳ್ಯೆದೆಲೆಯನ್ನು ಕಲಶದ ಸುತ್ತ ಜೋಡಿಸಿ ಅದರ ಮೇಲೆ ಅರಿಶಿಣ ಹಚ್ಚಿದ ತೆಂಗಿನಕಾಯಿಯನ್ನು ಇಟ್ಟು ಅದಕ್ಕೆ ಶ್ವೇತವರ್ಣದ ಕೆಂಪು ಅಂಚಿನ ಸೀರೆಯನ್ನು ಉಡಿಸಿ ಅಲಂಕರಿಸುತ್ತಾರೆ. ಜೊತೆ ಒಡವೆಗಳನ್ನು ಹಾಕಿ ಸಿಂಗಾರಗೊಳಿಸುತ್ತಾರೆ.

Advertisement

ಶುಕ್ರವಾರ ವರಮಹಾಲಕ್ಷ್ಮಿಯನ್ನು ಬ್ರಾಹ್ಮೀ ಲಗ್ನದಲ್ಲಿ ಪ್ರತಿಷ್ಠಾಪನೆ ಮಾಡಬೇಕು, ಮುಂಜಾನೆ 4:40 ರಿಂದ 5.30 ರವರೆಗೂ ಬ್ರಾಹ್ಮೀ ಲಗ್ನದ ಮುಹೂರ್ತವಿದೆ. ಇದೇ ಮುಹೂರ್ತದಲ್ಲಿ ಲಕ್ಷ್ಮಿಯನ್ನು ಕೂರಿಸಿ ಪೂಜೆ ಸಲ್ಲಿಸಬೇಕು. ಈ ಮುಹೂರ್ತದಲ್ಲಿ ಲಕ್ಷ್ಮಿಯನ್ನು ಕೂರಿಸಿ ಪೂಜೆ ಮಾಡಿದರೆ ನಮ್ಮ ಪ್ರಾರ್ಥನೆ ದೇವಿಗೆ ತಲುಪಿ, ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾಳೆ ಎನ್ನುವ ನಂಬಿಕೆಯಿದೆ.

ಲಕ್ಷ್ಮಿಗೆ ಹೂವುಗಳೆಂದರೆ ಬಹಳ ಪ್ರೀತಿ. ಅದರಲ್ಲೂ ಕಮಲದ ಹೂವು ಹಾಗೂ ಬಿಲ್ವಪತ್ರೆ ಎಂದರೆ ಲಕ್ಷ್ಮಿಗೆ ತುಂಬಾ ಪ್ರೀತಿ. ಹೀಗಾಗಿ ವ್ರತ ಮಾಡುವವರು ಈ ಹೂವನ್ನು ತಪ್ಪದೆ ತಾಯಿಯ ಬಳಿಯಿಟ್ಟು ಪೂಜೆ ಮಾಡುತ್ತಾರೆ. ಲಕ್ಷ್ಮಿ ಮುಂದೆ ಹಣ, ಚಿನ್ನ, ಬಳೆ, ಹಣ್ಣು, ಸ್ವೀಟ್, ಅರಿಶಿಣ, ಕುಂಕುಮ, ಎಲ್ಲವನ್ನು ಇಡುತ್ತಾರೆ.

ಬಿಲ್ವ ವೃಕ್ಷದಲ್ಲಿ ಲಕ್ಷ್ಮಿ ನೆಲೆಸಿದ್ದಾಳೆ ಎಂಬುದು ನಂಬಿಕೆಯಾಗಿದೆ. ಹೀಗಾಗಿ ಬಿಲ್ವ ಪತ್ರೆಯಿಂದ ಪೂಜೆ ಮಾಡಿದರೆ ತಾಯಿ ಒಲಿಯುವಳೆಂಬ ಪ್ರತೀತಿಯೂ ಇದೆ. ವರಲಕ್ಷ್ಮಿ ಎಂದರೆ ವರಗಳನ್ನು ಕೊಡುವವಳು ಎಂದು ಕೂಡ ಹೇಳುತ್ತಾರೆ. ಸಾಮಾನ್ಯವಾಗಿ ಲಕ್ಷ್ಮೀ ಪೂಜೆಯನ್ನು ಗೋಧೂಳಿ ಸಮಯದಲ್ಲಿ ಮಾಡಿದರೆ ಶ್ರೇಷ್ಠ. ಈ ವ್ರತವನ್ನು ಯಾರು ನಿಷ್ಠೆಯಿಂದ ಮಾಡುತ್ತಾರೋ ಅವರಿಗೆ ಹಾಗೂ ಅವರ ಮನೆಯವರಿಗೆಲ್ಲರಿಗೂ ಒಳ್ಳೆಯದಾಗುತ್ತದೆಂದೂ ಹಾಗೂ ಎಲ್ಲಾ ಕೆಲಸದಲ್ಲಿ ಏಳಿಗೆ ಆಗುತ್ತದೆಂಬ ನಂಬಿಕೆಯೂ ಇದೆ. ಹೀಗಾಗಿ ನಮ್ಮ ಪೂರ್ವಿಕರು ಎಲ್ಲಿ ತನು, ಮನ, ಮನೆ ಶುದ್ಧವಾಗಿರುತ್ತದೋ ಅಲ್ಲಿ ಲಕ್ಷ್ಮಿಯು ನೆಲೆಸುತ್ತಾಳೆ ಎಂಬ ನಂಬಿಕೆಯನ್ನು ಹೊಂದಿದ್ದರು.

ಲಕ್ಷ್ಮಿಗೆ ಪ್ರಿಯವಾದ ಧಾನ್ಯವೆಂದರೆ ಕಡಲೆಬೇಳೆ. ಆದ್ದರಿಂದ ವರಮಹಾಲಕ್ಷ್ಮಿ ಹಬ್ಬದ ದಿನದಂದು ನೈವ್ಯೇದ್ಯಕ್ಕೆ ಕಡಲೆಬೇಳೆಯಿಂದ ತಯಾರಿಸಿದ ಪಾಯಸ, ಹೋಳಿಗೆ ಇತ್ಯಾದಿ ಸಿಹಿ ತಿನಿಸುಗಳನ್ನು ದೇವರಿಗೆ ಅರ್ಪಿಸುತ್ತಾರೆ. ವ್ರತದ ನೇಮದ ಪ್ರಕಾರ ಪೂಜೆಯ ಸಿದ್ಧತೆಗಳೆಲ್ಲ ಆದ ನಂತರ ಮೊದಲು ವಿಘ್ನಕಾರಕನಾದ ಗಣಪತಿಯನ್ನು ಪೂಜಿಸಿ ನಂತರ ಯಮುನಾ ಪೂಜೆ ಅಂದರೆ ಶ್ರೇಷ್ಠವಾದ ನದಿಯ ನೀರನ್ನು ತಂದು ಪೂಜೆ ಮಾಡುತ್ತಾರೆ. ಇದಾದ ಮೇಲೆ ವರಲಕ್ಷ್ಮಿ ವ್ರತವನ್ನು ಆರಂಭಿಸುತ್ತಾರೆ. ಮನೆಗೆ ಮುತ್ತೈದೆಯರನ್ನು ಕರೆದು ಅರಿಶಿಣ, ಕುಂಕುಮ, ಸಿಹಿ ಕೊಡುತ್ತಾರೆ. ಇದೇ ರೀತಿ ಮದುವೆಯಾದ ಹೆಣ್ಣು ಮಕ್ಕಳು ಮೊದಲನೇ ವರ್ಷದಿಂದ ಒಂಬತ್ತು ವರ್ಷದವರೆಗೆ ಶ್ರದ್ಧೆಯಿಂದ ವ್ರತವನ್ನಾಚರಿಸಿ ಒಂಬತ್ತನೇ ವರ್ಷ ವ್ರತವನ್ನು ಮುಗಿಸುತ್ತಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ