Connect with us

Featured

ಪ್ರತಿಷ್ಠಿತ ವಿದ್ಯಾಸಂಸ್ಥೆಯಿಂದ ಜಾಗ ಒತ್ತುವರಿ: ಆಡಳಿತ ಮಂಡಳಿ, ಮಾಲೀಕರ ಹಗ್ಗಜಗ್ಗಾಟದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ರೈಸಿಂಗ್ ಕನ್ನಡ :

ರಾಮನಗರ :

 ಖಾಸಗಿ ಸ್ಥಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಶಾಲೆಯೊಂದರ ಜಾಗವನ್ನ ಮೂಲ ಮಾಲೀಕನಿಗೆ ಬಿಟ್ಟುಕೊಡುವಂತೆ  ನ್ಯಾಯಾಲಯ ಆದೇಶ ನೀಡಿದೆ. ಇದರಿಂದ ಈ ಶಾಲೆಯಲ್ಲಿ ಓದುತ್ತಿರುವ ಸಾವಿರಾರು ಮಕ್ಕಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಕಷ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳು

Advertisement

ಹೌದು ಇದು ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ಪ್ರತಿಷ್ಠಿತ ಖಾಸಗಿ ವಿದ್ಯಾಮಂದಿರ. ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ.  ಸುಮಾರು ವರ್ಷಗಳಿಂದ ಈ ಸ್ಥಳದಲ್ಲಿ ಶಾಲೆ ನಡೆಸಲಾಗುತ್ತಿದ್ದು, ಈಗ ವಿದ್ಯಾರ್ಥಿಗಳು ಅತಂತ್ರದಲ್ಲಿ‌‌ ಸಿಲುಕಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ಜಾಗದ ಸಮಸ್ಯೆ.

ಹೌದು ಮಾಗಡಿ ಪಟ್ಟಣದಲ್ಲಿ 2.17 ಎಕರೆ ಜಮೀನು ಇದೆ. ಈ ಹಿಂದೆ ಜಯಮ್ಮ ಎಂಬುವವರು ಎಜ್ಯುಕೇಷನ್ ಟ್ರಸ್ಟ್ ಗೆ 1.30 ಎಕರೆ ಜಾಗವನ್ನ ಮಾರಾಟ ಮಾಡಿದ್ದರು. ಆದರೆ ಪಿತ್ರಾರ್ಜಿತ ಸ್ವತ್ತಿನಲ್ಲಿ ನಮಗೂ ಪಾಲು ಬರಬೇಕೆಂದು ಶಾಲೆಯ ಆಡಳಿತ ಮಂಡಳಿ ವಿರುದ್ಧ ಮಾಗಡಿ ನ್ಯಾಯಾಲಯದಲ್ಲಿ ಕೇಸು ದಾಖಲಿಸಲಾಯಿತು. ವಾದ ಪ್ರತಿವಾದಗಳನ್ನ ಆಲಿಸಿದ ಕೋರ್ಟ್ ವಿದ್ಯಾ ಸಂಸ್ಥೆಗೆ ಕೇವಲ 23 ಗುಂಟೆ ಜಮೀನು ಸೇರಬೇಕು ಇರುವ 1.30 ಎಕರೆ ಜಾಗದಲ್ಲಿ ದೂರುದಾರರಾದ ಶಾರದಮ್ಮ ಹಾಗೂ ರೇವಮ್ಮ ಇಬ್ಬರಿಗೂ ಸರಿ ಸಮಾನವಾಗಿ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ.

ನೋಟೀಸ್​

ಘನ ನ್ಯಾಯಾಲಯ ಮೂಲ‌ ಮಾಲೀಕರ ಪರವಾಗಿ ತೀರ್ಪು ನೀಡಿರುವುದರಿಂದ ಎಜುಕೇಷನ್ ಟ್ರಸ್ಟ್‌ಗೆ ಕೇವಲ 23 ಗುಂಟೆ ಜಮೀನು ಮಾತ್ರ ಉಳಿದಿದೆ. ನಮ್ಮ ಜಾಗವನ್ನ ಬಿಟ್ಟುಕೊಡುವಂತೆ ಶಾಲೆಯ ಆಡಳಿತ ಮಂಡಳಿಯವರನ್ನ ಮಾಲೀಕರು ಕೇಳುತ್ತಿದ್ದಾರೆ.

ಸರ್ಕಾರಿ ನಿಯಮದ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಶಾಲೆ ನಿರ್ಮಾಣವಾಗ ಬೇಕಾದ್ರೆ ಕನಿಷ್ಟ ಎರಡು ಎಕರೆ ಜಮೀನು‌ ಇರಬೇಕು. ಆದ್ರೆ 23 ಗುಂಟೆ ಜಾಗ ಮಾತ್ರ ಶಾಲೆಗೆ ಉಳಿದಿದೆ. ಈ ಸಂಬಂದ ಈಗಾಗಲೆ ಸ್ಥಳ ಪರಿಶೀಲನೆ ಕೂಡ ನಡೆಸಲಾಗಿದೆ. ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆಡಳಿತ ಮಂಡಳಿಗೆ ನೋಟೀಸ್ ಕೂಡ ನೀಡಲಾಗಿದೆ.

ಈ ಜಾಗವನ್ನ 1991 ರಲ್ಲಿ ಶಾಲೆಯ ಆಡಳಿತ ಮಂಡಳಿ ಹೆಸರಿನಲ್ಲಿ ತೆಗೆದುಕೊಂಡಿದ್ದೇವೆ. ನಾವು ಒತ್ತುವರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ಕೂಡ ಸಲ್ಲಿಸಲಾಗಿದೆ‌.

ಒಟ್ಟಾರೆ ಶಾಲೆಯ ಜಾಗದ ವಿಷಯಕ್ಕೆ ಮೂಲ ಮಾಲೀಕರು ಹಾಗೂ ಶಾಲೆಯ ಆಡಳಿತ ಮಂಡಳಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಆತಂತ್ರದಲ್ಲಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ