ರೈಸಿಂಗ್ ಕನ್ನಡ :
ರಾಮನಗರ :
ಕೊರೋನಾ ವಿಚಾರದಲ್ಲಿ ಸರ್ಕಾರ ಸತ್ಯವನ್ನು ಹೇಳುತ್ತಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ. ಕರ್ನಾಟಕ ಸಾವಿನ ಮನೆಯಾಗಿದೆ ಎಂದು ಕಿಡಿಕಾರಿ ಕನ್ನಡ ಪರ ಹೆದ್ದಾರಿ ಮಧ್ಯ ನಿಂತು ಪ್ರತಿಭಟನೆ ನಡೆಸಿದರು. ನಗರ ಐಜೂರು ವೃತದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ನ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಸೋಂಕಿತರ ಪ್ರಾಣ ಉಳಿಸಬೇಕಾದದ್ದು ಸರ್ಕಾರದ ಕರ್ತವ್ಯ ಆದರೆ ಕರ್ನಾಟಕ ಸಾವಿನ ಮನೆಯಾಗಿದೆ, ಸರ್ಕಾರ ಹೇಳುವುದು ಒಂದು ಮಾಡುವುದು ಮತ್ತೊಂದು ಕಿಡಿಕಾರಿದ್ದಾರೆ. ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿದ್ಧವಿದೆ ಎಂದು ಹೇಳಿಕೆ ನೀಡಿದೆ ಆದರೆ ಬೆಂಗಳೂರಿನ ರಸ್ತೆ ರಸ್ತೆಗಳಲ್ಲಿ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತರು ಸಾಯುತ್ತಿದ್ದಾರೆ ಎಂದು ವಾಟಾಳ್ ನಾಗರಾಜ್ ಸರ್ಕಾರವನ್ನ ಪ್ರಶ್ನಿಸಿದ್ದಾರೆ.
ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಂಚಾರಿ ಆಸ್ಪತ್ರೆ ಸಂಖ್ಯೆ ಹೆಚ್ಚಿಸಿ ತ್ವರಿತವಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ವಾಟಳ್ ನಾಗರಾಜ್ ಆಗ್ರಹಿಸಿದರು. ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಕಸದಂತೆ ಎಸೆಯುವುದು ತಪ್ಪಬೇಕು, ಉತ್ತಮ ರೀತಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಜಾಗ ಗುರುತು ಮಾಡಬೇಕು. ರಾಜ್ಯದ ಪ್ರತಿ ಜಿಲ್ಲೆಗೆ 10 ಎಕರೆ ಹಾಗೂ ಪ್ರತಿ ತಾಲ್ಲೂಕಿಗೆ ಎರಡು ಎಕರೆ ಸೋಂಕಿತರ ಅಂತ್ಯ ಸಂಸ್ಕಾರ ಮಾಡಲು ಜಾಗ ನಿಗದಿ ಮಾಡಿ ಎಂದು ರಾಜ್ಯ ಸರ್ಕಾರವನ್ನು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?