ರಾಜಕೀಯ
ಇನ್ನೂ ನಾಲ್ಲೇ ದಿನದಲ್ಲಿ ಮ್ಯಾಜಿಕ್ ಆಗುತ್ತೆ ನೋಡ್ತಾರಿ ಎಂದ ವಿಜಯೇಂದ್ರ

ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಬುಧವಾರದಂದು ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ಮೈಸೂರಿನಿಂದ ಚುನಾವಣಾ ಪ್ರಚಾರ ಪ್ರಾರಂಭಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಚಾರ ನಡೆಸಿದ್ದಾರೆ.
ಈ ವೇಳೆ ಮಾತಮಾಡಿ ಶಿವಮೊಗ್ಗ ಸೇರಿ ಎಲ್ಲಡೆ ಬಿಜೆಪಿ ಬಂಡಾಯ 4 ದಿನಗಳಲ್ಲಿ ಶಮನಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಎಲ್ಲ ಕಡೆ ತೆರಳಿ ಭಿನ್ನಮತ ಶಮನಗೊಳಿಸಲಿದ್ದಾರೆ. ಎಲ್ಲ ಮುಖಂಡರು ಒಮ್ಮತದಿಂದ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೂ ನಾಲ್ಲೇ ದಿನದಲ್ಲಿ ಆ ಮ್ಯಾಜಿಕ್ ಆಗುತ್ತೆ ನೋಡ್ತಾರಿ. ಯಡಿಯೂರಪ್ಪ ಎಲ್ಲಾ ಕಡೆ ಹೋಗಿ ಭಿನ್ಮ ಮತ ಶಮನ ಮಾಡುತ್ತಾರೆ. ನರೇಂದ್ರ ಮೋದಿ ಅವರ ಅಲೆ ಮತ್ತು ನಾಯಕತ್ವಕ್ಕಾಗಿ ಪಕ್ಷದ ಎಲ್ಲ ನಾಯಕರು ಒಂದಾಗಿ ಕೆಲಸ ಮಾಡುತ್ತಾರೆ ಎಂದು ತಿ್ಳಿಸಿದರು.
ರಾಜ್ಯದಲ್ಲಿ ಅಪ್ಪಮಕ್ಕಳ ರಾಜ್ಯಭಾರ ನಡೆಯುತ್ತಿದೆ ಎಂಬ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಟೀಕೆಗೆ ಪ್ರತಿಕ್ರಿಯಿಸಿ, ಪಕ್ಷದ ಎಲ್ಲಾ ನಿರ್ಧಾರಗಳನ್ನು ವಿಜಯೇಂದ್ರ ಯಡಿಯುರಪ್ಪ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ಹೈ ಕಮಾಂಡ್ ನಿರ್ಧಾರಗಳೇ ಅಂತಿಮ. ಪಕ್ಷ ನಮ್ಮ ಮಾತುಗಳನ್ನ ಕೇಳಿಕೊಂಡು ಎಲ್ಲಾವನ್ನೂ ನಿರ್ಧಾರ ಮಾಡುತ್ತಿಲ್ಲ. ಪಕ್ಷ ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ ಎಂದರು.
ಇದೇ ವೇಳೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಯಗೊಂಡಿದೆ. ಸೋಲುವ ಭೀತಿಯಿಂದ ಸಚಿವರು ಚುನಾವಣಾ ಸ್ಪರ್ಧೇಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿಸಿದರು.
ಸಿಎಂ ಡಿಸಿಎಂ 18 ಸಚಿವರನ್ನ ಕಣಕ್ಕಿಳಿಸಲು ಮುಂದಾಗಿದ್ದರು. ಮೋದಿಯ ಅಲೇಗೆ ಹೆದರಿ ಯಾವ ಸಚಿವರು ಸ್ಪರ್ಧೆ ಮಾಡಿಲ್ಲ. ಎಲ್ಲಾ ಸಚಿವರಿಗೂ ಸೋಲುವ ಭೀತಿ ಕಾಡುತ್ತಿದೆ. ಹೀಗಾಗಿ ಯಾರು ಸ್ಪರ್ಧೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ ಎಂದು ಟೀಕಿಸಿದರು.
ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಕಳೆದುಕೊಂಡ ಏಕೈಕ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಬಡವರು ಶೋಷಿತರು ರೈತರು ಯಾರ ಪರವಾಗಿಯೂ ಈ ಸರ್ಕಾರ ಇಲ್ಲ. ಜನರು ಬೇಸತ್ತಿದ್ದಾರೆ. ಹೀಗಾಗಿ ನಮ್ಮ ಮುಖಂಡರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?