ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿ ಗೆದ್ದ ಬೆನ್ನಲ್ಲೇ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ‘‘ಹೌದು.. ಯುವ ಆಟಗಾರರಿಂದ ಕೂಡಿದ ತಂಡ ಸರಣಿ ಗೆದ್ದಿರುವುದು ಸ್ಮರಣೀಯವಾದದ್ದು. ಇದು ಆಟಗಾರರ ಛಲ, ದೃಢ ನಿಶ್ಚಯ ಮತ್ತು ಪುಟಿದೇಳುವುದಕ್ಕೆ ಸಾಕ್ಷಿಯಾಗಿದೆ’’ ಎಂದು ವಿರಾಟ್ ಪೋಸ್ಟ್ ಮಾಡಿದ್ದಾರೆ.
ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡ 5 ವಿಕೆಟ್ ಗಳಿಂದ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿತ್ತು. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದೆ. ಮಗು ಜನಿಸಿದ ಕಾರಣಕ್ಕೆ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದರು. ಕುಟುಂಬದ ಸಮಯ ಕಳೆಯಲು ವಿರಾಟ್ ಬಿಡುವು ಮಾಡಿಕೊಂಡಿದ್ದರು. ಇಷ್ಟಾದರೂ ಭಾರತ ಸರಣಿ ಗೆದ್ದ ಕೆಲವೇ ನಿಮಿಷಗಳಲ್ಲಿ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಶುಭ ಕೋರುವ ಪೋಸ್ಟ್ ಮಾಡಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ ಕೊಂಚ ಹಿನ್ನಡೆ ಅನುಭವಿಸಿದ್ದ ಭಾರತ, ಎರಡನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 145 ರನ್ ಗಳಿಗೆ ಆಲೌಟ್ ಮಾಡಲು ಯಶಸ್ವಿಯಾಗಿತ್ತು. ಈ ಮೂಲಕ ಪಂದ್ಯ ಗೆಲ್ಲಲು 192 ರನ್ ಗಳಿಸಬೇಕಾಗಿತ್ತು. ಮೂರನೇ ದಿನ ಗುರಿಯ ಬೆನ್ನತ್ತಿದ್ದ ಭಾರತಕ್ಕೆ ತಂಡದ ನಾಯಕ ರೋಹಿತ್ ಶರ್ಮಾ ಆಸರೆಯಾಗಿದ್ದರು. ಇಬ್ಬರೂ ಆರಂಭಿಕ ಆಟಗಾರರು ಔಟಾಗದೇ 40 ರನ್ ಗಳಿಸಿದ್ದರು. ನಾಲ್ಕನೇ ದಿನ ಆಟ ಮುಂದುವರಿಸಿದ ರೋಹಿತ್ ಮತ್ತು ಜೈಸ್ವಾಲ್ ಮೊದಲ ವಿಕೆಟ್ಗೆ 84 ರನ್ ಜೋಡಿಸಿದ್ದರು. ಈ ವೇಳೆ ಭಾರತಕ್ಕೆ ಮೊದಲ ಆಘಾತ ಎದುರಾಯ್ತು.
ಇದಾದ ಬಳಿಕ ಕ್ರೀಸ್ ಗಿಳಿದ ಶುಭಮನ್ ಗಿಲ್ ಅರ್ಧಶತಕ ಗಳಿಸುವ ಮೂಲಕ ತಂಡವನ್ನು ವಿಜಯದ ಗಡಿ ದಾಟಿಸಿದರು. ಇವರಿಗೆ ಧ್ರುವ್ ಜುರೆಲ್ ಉತ್ತಮ ಸಾಥ್ ನೀಡುವ ಮೂಲಕ ಆರನೇ ವಿಕೆಟ್ ಗೆ ಮುರಿಯದ 72 ರನ್ ಪೇರಿಸಿದರು. ಈ ಮೂಲಕ ಭಾರತ ಪಂದ್ಯದ ಜೊತೆಗೆ ಸರಣಿ ಗೆಲ್ಲಲು ನೆರವಾದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?