ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನ ಹಿಂಪಡೆದಿದ್ದನ್ನು ವಿರೋಧಿಸಿದ್ದ ಜಮ್ಮುವಿನ 6 ಪಕ್ಷಗಳನ್ನ ನಿರ್ಧಾರವನ್ನ ಬೆಂಬಲಿಸಿದ್ದ ಪಾಕಿಸ್ತಾನಕ್ಕೆ ನ್ಯಾಷನಲ್ ಕಾನ್ಫೆರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿರುಗೇಟು ಕೊಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನ ಕೇಂದ್ರ ಹಿಂಪಡೆದ ಕುರಿತು ಕಣಿವೆ ರಾಜ್ಯದ ಆರು ಪಕ್ಷಗಳು ಖಂಡಿಸಿದ್ದವು. ಇದನ್ನ ನೆಪವಾಗಿಟ್ಟುಕೊಂಡು ಪಾಪಿ ಪಾಕಿಸ್ಥಾನ ಸ್ವಾಗತಿಸಿತ್ತು.
ಈ ಬೆಳವಣಿಗೆ ಸಾಧಾರಣವಾದುದ್ದಲ್ಲ, ಬದಲಿಗೆ ಮಹತ್ವದ್ದಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಖುರೇಶಿ ಹೇಳಿದ್ದರು.
ಈ ಬಗ್ಗೆ ಮಾತನಾಡಿರುವ ನ್ಯಾಷನಲ್ ಕಾನ್ಪೆರೆನ್ಸ್ ಪಕ್ಷದ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ನಾವು ಯಾರ ಕೈಗೊಂಬೆಯೂ ಅಲ್ಲ ಎಂದು ಪಾಕಿಸ್ತಾನಕ್ಕೆ ಹೇಳಿದ್ದಾರೆ.
ನಾವು ಯಾರಿಗೂ ಸಹ ಕೈಗೊಂಬೆಗಳಲ್ಲ. ದೆಹಲಿಗೂ ಕೈಗೊಂಬೆಗಳಲ್ಲ.ಗಡಿಯಾಗಚೆಗೂ ಕೈಗೊಂಬೆಗಳಲ್ಲ. ನಾವು ಜಮ್ಮು ಕಾಶ್ಮೀರದ ಜನರಿಗೆ ಮಾತ್ರ ಉತ್ತರದಾಯಿಗಳು ಅವರ ಒಳಿತಿಗಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?