ರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗಿಯೇ ಇಲ್ಲ.. ಆಗಲೇ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ಜನವರಿ ಮಧ್ಯ ಭಾಗದಿಂದಲೇ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, 700 ರೂಪಾಯಿ ಇದ್ದ ಪ್ರತಿ ಟ್ಯಾಂಕರ್ ನೀರಿನ ಬೆಲೆ 1,500 ರೂಪಾಯಿಗೆ ಏರಿಕೆಯಾಗಿದೆ. ಚಳಿಗಾಲದಲ್ಲಿಯೇ ಬೆಂಗಳೂರಿನಲ್ಲಿ ನೀರಿ ಬರ ಆರಂಭವಾಗಲು ಹಲವಾರು ಕಾರಣಗಳಿವೆ.
ಕಳೆದ ವರ್ಷ ನಿರೀಕ್ಷಿತ ಮಳೆ ಆಗದೇ ಇರುವುದು, ಬೋರ್ವೆಲ್ಗಳು ಬತ್ತಿ ಹೋಗಿರುವುದು, ಅಂತರ್ಜಲ ಮಟ್ಟ ಕುಸಿತ, ದಿನೇದಿನೆ ಜನಸಂಖ್ಯೆ ಹೆಚ್ಚಳದಿಂದ ನೀರಿಗೆ ಬೇಡಿಕೆ ಹೆಚ್ಚಿರುವುದು ಇವುಗಳಿಗಿರುವ ಹಲವು ಕಾರಣಗಳು. ಬೆಂಗಳೂರಿನಲ್ಲಿ ಪ್ರಸ್ತುತ 1 ಕೋಟಿ ಜನ ವಾಸ ಮಾಡುತ್ತಿದ್ದಾರೆ. 2025ರ ವೇಳೆ ಬೆಂಗಳೂರಿನ ಜನಸಂಖ್ಯೆ 1 ಕೋಟಿ 25 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ಕರೆಯಲಾಗುತ್ತಿದೆ.
ಒಂದು ಕಾಲಕ್ಕೆ ಉದ್ಯಾನ ನಗರಿ, ಕೆರೆಗಳ ಊರು ಎಂದು ಕರೆಸಿಕೊಳ್ಳುತ್ತಿದ್ದ ಬೆಂಗಳೂರಿನಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿದಿರುವುದು, ಕೆರೆಗಳ ಒತ್ತುವರಿಯಿಂದಾಗಿ ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಿದೆ. ಬಹುತೇಕ ಪ್ರದೇಶಗಳಿಗೆ ಕಾವೇರಿ ನದಿಯಿಂದ ನೀರು ಪೂರೈಕೆ ಆಗುತ್ತಿದೆ. ಆದರೆ, ಕಳೆದ ವರ್ಷ ಅನಾವೃಷ್ಟಿಯಾದ ಪರಿಣಾಮ ಕಾವೇರಿ ನೀರಿನ ಪೂರೈಕೆಯಲ್ಲೂ ವ್ಯತ್ಯಯವಾಗಿದೆ. ಹೀಗಾಗಿ ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ನೀರಿನ ಬರ ಎದುರಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?