Connect with us

ಬೆಂಗಳೂರು

ಹಸಿವಿನಿಂದ ಭಾರತದಲ್ಲಿ ಸಾಯೋದ್ಯಾಕೆ..?: ಇಸ್ರೇಲ್ ನತ್ತ ಹೊರಟ 10 ಸಾವಿರ ಕಾರ್ಮಿಕರು!

ಇಲ್ಲಿ ಹಸಿವಿನಿಂದ ಸಾಯೋದಕ್ಕಿಂತ ಅಲ್ಲಿ ಸಾಯುವುದೇ ಲೇಸು..ಇಂತಹದ್ದೊಂದು ಸ್ಟೇಟ್ಮೆಂಟ್ ಕೊಟ್ಟಿರೋದು ಇಸ್ರೇಲ್ ನಲ್ಲಿ ಕೆಲಸ ಮಾಡಲು ಹೊರಟಿರುವ ಕಾರ್ಮಿಕರು..ಭಾರತ ಸುಭದ್ರವಾಗಿದೆ. ಇಲ್ಲಿ ಉದ್ಯೋಗ ಸೃಷ್ಟಿ ಮಾಡಲಾಗಿದೆ ಎಂದು ಪ್ರತಿಭಾಷಣದಲ್ಲೂ ಹೇಳುವ ನರೇಂದ್ರ ಮೋದಿಯವರೇ..ಇದೇನಾ ಸುಭದ್ರಾ ಸರ್ಕಾರ ಎಂದು ಪ್ರಶ್ನಿಸುವ ಸ್ಥಿತಿ ಎದುರಾಗಿದೆ. ಹೌದು ಇಸ್ರೇಲ್ ಯುದ್ದ ನೆಲೆಯಾಗಿದೆ.. ಇಲ್ಲಿ ಕೆಲಸ ಮಾಡೋದಿಕ್ಕೆ ನೌಕರರು, ಕಾರ್ಮಿಕರು ಸಿಗುತ್ತಿಲ್ಲ..ಈ ಹಿನ್ನೆಲೆ ಭಾರತದಿಂದ ಬ್ಯಾಚ್ ಬೈ ಬ್ಯಾಚ್ ಸುಮಾರು 10 ಸಾವಿರ ಕಾರ್ಮಿಕರು ಇಸ್ರೇಲ್ ಗೆ ತೆರಳಲಿದ್ದಾರೆ.. ಈ ಹಿನ್ನೆಲೆ ಪಾಸ್ ಪೋರ್ಟ್ ಹಿಡ್ಕೊಂಡು ಸಜ್ಜಾಗಿದ್ದಾರೆ.

ಹಮಾಸ್​ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವ ಪ್ರತೀಕಾರ ಮಾಡಿರುವ ಇಸ್ರೇಲ್​ ನಾಡಿಗೆ ಉದ್ಯೋಗ ಅರಸಿ ಭಾರತದ ಸಾವಿರಾರು ಕಾರ್ಮಿಕರು ಪ್ರಯಾಣಿಸಲು ಅಣಿಯಾಗಿದ್ದಾರೆ. ಇದಕ್ಕಾಗಿ ನಾ ಮುಂದು, ತಾ ಮುಂದು ಎಂದು ಮುಗಿಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಸ್ರೇಲ್​ ಸದ್ಯಕ್ಕೆ ಕಾರ್ಮಿಕರ ಬಿಕ್ಕಟ್ಟು ಎದುರಿಸುತ್ತಿದೆ. ಯುದ್ದದ ಹಿನ್ನೆಲೆಯಲ್ಲಿ ಇಸ್ರೇಲ್​​ ಗಡಿ ದಾಟಿ ಪ್ಯಾಲೇಸ್ತೀನಿಯರು ಕೆಲಸಕ್ಕೆ ಬಾರದಂತೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕಾರ್ಮಿಕರು ಸಿಗುತ್ತಿಲ್ಲ. ಇದೀಗ ಇಸ್ರೇಲ್​ ಅಧಿಕಾರಿಗಳು ಭಾರತದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದಾರೆ.

ಭಾರತದಲ್ಲಿ ಕಟ್ಟಡ ಕಾರ್ಮಿಕರು, ಗಾರೆ ಕೆಲಸದವರು, ಮರಗೆಲಸ, ಪ್ಲಂಬಿಂಗ್​ನಂತಹ ಕೌಶಲ್ಯ ಹೊಂದಿರುವವರ ನೇಮಕಕ್ಕೆ ಇಸ್ರೇಲ್ ಮುಂದಾಗಿದೆ. ಇದಕ್ಕಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ವಿಶೇಷ ನೇಮಕಾತಿ ಕೇಂದ್ರಗಳನ್ನು ತೆರೆಯಲಾಗಿದೆ. ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಪಂಜಾಬ್​ನ ಜನರು ನೋಂದಣಿ ಕೇಂದ್ರಗಳಿಗೆ ಬರುತ್ತಿದ್ದಾರೆ. ವಿವಿಧ ಉದ್ಯೋಗಗಳಿಗಾಗಿ ಸದ್ಯ 3,080 ಮಂದಿ ಇಸ್ರೇಲ್​​ಗೆ ತೆರಳಲು ಆಯ್ಕೆಯಾಗಿದ್ದಾರೆ. ಲಕ್ನೋದ ಸರ್ಕಾರಿ ಐಟಿಐಯಲ್ಲಿ ಇಸ್ರೇಲ್​ಗೆ ಕಳುಹಿಸುವ ಕಾರ್ಮಿಕರ ನೋಂದಣಿ ಕಾರ್ಯ ಕೂಡ ಮುಗಿದಿದೆ.

“ಇಸ್ರೇಲ್​ನಲ್ಲಿ 10 ಸಾವಿರ ಕಟ್ಟಡ ಕಾರ್ಮಿಕ ಹುದ್ದೆಗಳಿವೆ. ಇದಕ್ಕಾಗಿ ಸಾವಿರಾರು ಮಂದಿ ಐಟಿಐ ಕಚೇರಿ ಎದುರು ನೋಂದಣಿಗೆ ನಿಂತಿದ್ದಾರೆ. ಕಾರ್ಮಿಕ ಇಲಾಖೆಯಿಂದ ನೋಂದಣಿಗೊಂಡ ಮತ್ತು ಸಂಸ್ಥೆ ಸಹಿ ಮಾಡಿದ ಅರ್ಜಿಗಳನ್ನು ಆರಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಜನವರಿ 30ರಂದ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗಿದೆ. ಇಸ್ರೇಲ್​ನಲ್ಲಿ ಯುದ್ದದ ಪರಿಸ್ಥಿತಿಯ ನಡುವೆಯೂ ಭಾರತದ ಕಾರ್ಮಿಕರು ಅಲ್ಲಿಗೆ ತೆರಳಲು ಮುಂದಾಗಿರುವುದಕ್ಕೆ ಪ್ರಮುಖ ಕಾರಣ ಕೈ ತುಂಬಾ ಸಿಗಲಿರುವ ವೇತನ. ಇಸ್ರೇಲ್​ನಲ್ಲಿ ಉದ್ಯೋಗಕ್ಕೆ ಆಯ್ಕೆಯಾದ ಜನರಿಗೆ ಅಲ್ಲಿನ ಸರ್ಕಾರ ಅನೇಕ ಭತ್ಯೆಗಳೊಂದಿಗೆ ಮಾಸಿಕ 1,37,250 ರೂ ಜೊತೆಗೆ, 15 ಸಾವಿರ ರೂ​ ಬೋನಸ್​ ಕೊಡುತ್ತದೆ.

ಈ ವೇತನವನ್ನು ಭಾರತದಲ್ಲಿ ದುಡಿಯಲು ಸರಾಸರಿ ಆರು ತಿಂಗಳು ಬೇಕಾಗುತ್ತದೆ. ಹೀಗಾಗಿ, ಅನೇಕ ಕಾರ್ಮಿಕರು ಅಲ್ಲಿಗೆ ತೆರಳಲು ಸಜ್ಜಾಗಿದ್ದಾರೆ. ನರ್ಸಿಂಗ್​ ಮತ್ತು ಕಟ್ಟಡ ನಿರ್ಮಾಣ ವಲಯದಲ್ಲಿ 40 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕಳುಹಿಸುವ ಒಡಂಬಡಿಕೆಗೆ ಕಳೆದ ವರ್ಷ ಭಾರತ ಮತ್ತು ಇಸ್ರೇಲ್​ ಸರ್ಕಾರಗಳು ಸಹಿ ಹಾಕಿವೆ. ಇನ್ನು ಅಲ್ಲಿಗೆ ತೆರಳುತ್ತಿರುವ ಪ್ರತಿ ಕಾರ್ಮಿಕರು ಹೇಳುತ್ತಿರುವ ಮಾತು ಒಂದೇ..ಅದು ಸಂಬಳ…ನಾನು ಸತ್ರೂ ಪರ್ವಾಗಿಲ್ಲ..ನನ್ನ ಮಕ್ಕಳಿಗಾದ್ರೂ ಒಳ್ಳೇಯದು ಆಗಲಿ ಅನ್ನೋ ಮಾತು.

ಹಸಿವು ಎಂತಹ ನಿರ್ಧಾರಕ್ಕೆ ಬೇಕಾದ್ರೂ ಮನುಷ್ಯನನ್ನ ನೂಕುತ್ತೆ ಅನ್ನೋದಿಕ್ಕೆ ಇಸ್ರೇಲ್ ನತ್ತ ಹೊರಟಿರುವ ಕಾರ್ಮಿಕರೇ ತಾಜಾ ಉದಾಹರಣೆ. ಇಸ್ರೇಲ್ಗೆ ತೆರಳುತ್ತಿರವವರಿಗೆ ಯಾವುದೇ ಭದ್ರತೆಯನ್ನೂ ಭಾರತ ಸರ್ಕಾರ ನೀಡಿಲ್ಲ..ಅಲ್ಲೋಗಿ ಏನಾದ್ರೂ ಹೆಚ್ಚು ಕಡಿಮೆ ಆದ್ರೂ ಅದಕ್ಕೆ ಸ್ವ ಇಚ್ಚೆಯಿಂದ ತೆರಳುತ್ತಿರುವ ಅವರದೇ ಹೊಣೆ ಎಂದಿದೆ ಸರ್ಕಾರ. ವಲಸೆ ಹೋಗುವ ಕಾರ್ಮಿಕರಿಗೆ ಕನಿಷ್ಟ ವಿಮೆ ಸೌಲಭ್ಯವೂ ಇಲ್ಲ..ಆದ್ರೂ ಜಸ್ಟ್ ಸಂಬಳದಾಸೆಗೆ ಇವರೆಲ್ಲಾ ಯುದ್ಧ ಭೂಮಿಯತ್ತ ಹೆಜ್ಜೆ ಹಾಕುತ್ತಿದ್ದಾರೆ..ಭಾರತದಲ್ಲಿ ಬಡತನ ಮತ್ತು ಹಸಿವು ತಾಂಡವಾಡುತ್ತಿದೆ ಅನ್ನೋದಿಕ್ಕೆ ಇದಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ