ರೈಸಿಂಗ್ ಕನ್ನಡ :
ರಾಜ್ಯ ರಾಜಕಾರಣದಲ್ಲೇ ಅಲ್ಲ, ಸದ್ಯ ಕರ್ನಾಟಕ ರಾಜಕೀಯ ಬೆಳವಣಿಗೆ ರಾಷ್ಟ್ರ ರಾಜಕೀಯದಲ್ಲಿ ಸದ್ದು ಮಾಡ್ತಿದೆ. ಇಷ್ಟು ದಿನ ಸಿಎಂ ಯಡಿಯೂರಪ್ಪ ಬದಲಾವಣೆ ಆಗ್ತಾರೆ ಅಂತ ಕರ್ನಾಟಕ ಕೆಲವು ಸಣ್ಣ-ಪುಟ್ಟ ಲೀಡರ್ಗಳು ಹೇಳ್ತಿದ್ರು. ಆದ್ರೀಗ, ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಶೀಘ್ರವೇ ರಾಜೀನಾಮೆ ಕೊಡ್ತಾರೆ ಅಂತ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗ್ತಿದೆ.
ಪ್ರಧಾನಿ ಮೋದಿ-ಯಡಿಯೂರಪ್ಪ ಭೇಟಿಯಲ್ಲಿ ಆಗಿದ್ದೇನು.?
ಕೆಲವು ರಾಷ್ಟ್ರೀಯ ಸುದ್ದಿ ವಾಹಿನಿಗಳ ವರದಿಯನ್ನ ಪರಿಗಣಿಸಿದ್ರೆ, ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡ್ತಿದ್ದಾರೆ. ಆರೋಗ್ಯ ಸಮಸ್ಯೆ ಹಾಗೂ ವಯಸ್ಸಿನ ಕಾರಣ ನೀಡಿ ರಾಜೀನಾಮೆ ನೀಡಲು ಯಡಿಯೂರಪ್ಪ ರೆಡಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಭೇಟಿ ವೇಳೆ, ಸ್ವತಃ ಯಡಿಯೂರಪ್ಪನವರೇ ರಾಜೀನಾಮೆ ಪತ್ರವನ್ನ ನೀಡಿದ್ದಾರೆ ಅನ್ನೋ ಸುದ್ದಿ ರಾಷ್ಟ್ರೀಯ ನ್ಯೂಸ್ ಚಾನೆಲ್ಗಳಲ್ಲಿ ಜೋರಾಗಿಯೇ ಸದ್ದು ಮಾಡ್ತಿದೆ.
ಜುಲೈ 25ಕ್ಕೆ ಯಡಿಯೂರಪ್ಪ ರಾಜೀನಾಮೆ.?
ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಇದೇ ತಿಂಗಳ 25ಕ್ಕೆ ರಾಜೀನಾಮೆ ನೀಡ್ತಾರೆ ಎನ್ನಲಾಗಿದೆ. ರಾಜೀನಾಮೆಗೂ ಮುನ್ನ ದೊಡ್ಡ ಕಾರ್ಯಕ್ರಮ ಮಾಡಿ, ಗೌರವಾನ್ವಿತರಾಗಿ ರಾಜೀನಾಮೆ ನೀಡಲಿದ್ದಾರೆ ಅನ್ನೋ ಮಾತುಗಳು ಕೇಳಿ ಬರ್ತಿವೆ. ಬಿಜೆಪಿ ಕಾರ್ಯಕರ್ತರು, ಲಿಂಗಾಯಿತ ಸಮುದಾಯ ಸೇರಿ ಯಡಿಯೂರಪ್ಪ ಅಭಿಮಾನಿಗಳಿಗೆ ಯಾವುದೇ ನೆಗೆಟಿವ್ ಮೆಸೇಜ್ ಹೋಗದಂತೆ, ಗೌರವಾನ್ವಿತವಾಗಿ ಯಡಿಯೂರಪ್ಪ ನಿರ್ಗಮನಕ್ಕೆ ಬಿಜೆಪಿ ಹೈಕಮಾಂಡ್ ಪ್ಲಾನ್ ಮಾಡಿದೆ ಎನ್ನಲಾಗಿದೆ.
ಬಿ.ವೈ. ವಿಜಯೇಂದ್ರಗೆ ಪ್ರಮುಖ ಸ್ಥಾನ.?
ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಲು, ಕೆಲವು ಷರತ್ತುಗಳನ್ನ ಹಾಕಿದ್ದಾರೆ ಎನ್ನಲಾಗಿದೆ. ತಮ್ಮ ಪುತ್ರ ವಿ.ವೈ. ವಿಜಯೇಂದ್ರಗೆ ಪಕ್ಷ ಹಾಗೂ ಸರ್ಕಾರದಲ್ಲಿ ಪ್ರಮುಖ ಸ್ಥಾನ-ಮಾನ ನೀಡುವಂತೆ ಹೈಕಮಾಂಡ್ಗೆ ಒತ್ತಾಯಿಸಿದ್ದಾರಂತೆ. ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಗೆ ಸೂಚಿಸಿದ್ದು, ಪಕ್ಷಕ್ಕೆ ಯಾವುದೇ ಧಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದು ಬಿಎಸ್ವೈಗೆ ಹೇಳಿದೆ ಎನ್ನಲಾಗಿದೆ.
ಹಾಗಿದ್ರೆ, ಜುಲೈ 25ಕ್ಕೆ ಬಿಎಸ್ವೈ ರಾಜೀನಾಮೆ ಕೊಡ್ತಾರಾ.? ಮುಂದಿನ ಸಿಎಂ ಯಾರ್ ಆಗ್ತಾರೆ.? ಅನ್ನೋ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಜೋರಾಗಿಯೇ ಚರ್ಚೆ ಆಗ್ತಿದೆ..
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?